27.3 C
Gadag
Wednesday, June 7, 2023

ದೇವೇಗೌಡರದ್ದು ಹಗಲುಗನಸು, ಸಿದ್ದರಾಮಯ್ಯ ಇಲ್ಲದ ಕಾಂಗ್ರೆಸ್ ಬಿಗ್ ಝೀರೋ: ಬಿ ಸಿ ಪಾಟೀಲ

Spread the love

ವಿಜಯಸಾಕ್ಷಿ ಸುದ್ದಿ, ಕೊಪ್ಪಳ

ಮುಂದಿನ‌ ಚುನಾವಣೆಯಲ್ಲಿ ಜೆಡಿಎಸ್‌ನ್ನು ಅಧಿಕಾರಕ್ಕೆ ತಂದೇ ಕಣ್ಣು ಮುಚ್ಚುತ್ತೇನೆ ಎಂಬ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಕೃಷಿ ಸಚಿವ ಬಿ.ಸಿ.ಪಾಟೀಲ ದೇವೇಗೌಡರದ್ದು ಹಗಲುಗನಸು ಎಂದು ವ್ಯಂಗ್ಯವಾಡಿದರು.

ಕೊಪ್ಪಳದ ಪಕ್ಷದ ಜಿಲ್ಲಾ ಕಚೇರಿಯಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗ ಜೆಡಿಎಸ್‌ಗೆ 40 ಸ್ಥಾನ ಬಂದಿವೆ. ಮುಂದಿನ ಚುನಾವಣೆಯಲ್ಲಿ ನಾಲ್ಕು ಸೀಟು ಬರೋದು ಕಷ್ಟ ಇದೆ. ತಮ್ಮ ಪಕ್ಷದ ಶಾಸಕರು ಬಿಟ್ಟು ಹೋಗ್ತಾರೆ ಅಂತಾ ದೇವೆಗೌಡರು ಆ ರೀತಿ ಹೇಳಿರಬಹುದು. ಈಗಾಗಲೇ ಕಾಂಗ್ರೆಸ್, ಬಿಜೆಪಿ‌ ಅಂತಾ ಒಬ್ಬೊಬ್ಬರು ಜೆಡಿಎಸ್ ಬಿಟ್ಟು ಹೋಗ್ತಾ ಇದ್ದಾರೆ ಎಂದು ಪಾಟೀಲ್ ಲೇವಡಿ ಮಾಡಿದರು.

ಬಿಜೆಪಿ ಅವರು ನನ್ನನ್ನು ಟಾರ್ಗೆಟ್ ಮಾಡಿ ಮಾತನಾಡುತ್ತಾರೆ ಎಂಬ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ ಪ್ರತಿಕ್ರಿಯೆ ನೀಡಿದ ಅವರು,
ಸಿದ್ದರಾಮಯ್ಯ ಇಲ್ಲದ ಕಾಂಗ್ರೆಸ್ ದೊಡ್ಡ ಶೂನ್ಯ.
ಇದನ್ನು ಸಿದ್ದರಾಮಯ್ಯ ಅವರೇ ಹೇಳಿಕೊಂಡಿದ್ದಾರೆ.
ಅವರು ಚಾಲ್ತಿಯಲ್ಲಿದ್ದಾರೆ, ಅದಕ್ಕೆ ಅವರ ಬಗ್ಗೆ ಮಾತನಾಡ್ತಾರೆ. ಇನ್ನುಳಿದವರ ಚಾಲ್ತಿಯಲ್ಲಿ ಇಲ್ಲ ಅದಕ್ಕೆ ಅವರ ಬಗ್ಗೆ ಮಾತನಾಡುವುದಿಲ್ಲ ಎಂದರು.


Spread the love

Related Posts

LEAVE A REPLY

Please enter your comment!
Please enter your name here

Stay Connected

0FansLike
3,803FollowersFollow
0SubscribersSubscribe
- Advertisement -spot_img

Latest Posts