36.4 C
Gadag
Friday, June 2, 2023

ದೇಶದ ಬಡವರಿಗೆ ಕಾಂಗ್ರೆಸ್ ಸಿಲಿಂಡರ್ ತಲುಪಿಸಿಲ್ಲ, ಮನೆ ಕಟ್ಟಿಸಿಲ್ಲ, ಆಯುಷ್ಮಾನ್ ಮಾಡಲಿಲ್ಲ; ಏಕೆಂದರೆ, ಅವರಿಗೆ ಬಡವರನ್ನು ಹೊಡೆದೋಡಿಸುವ ಉದ್ದೇಶವಿತ್ತು: ಅಮಿತ್ ಶಾ ಕಿಡಿ

Spread the love

ವಿಜಯಸಾಕ್ಷಿ ಸುದ್ದಿ, ಬೆಳಗಾವಿ

ಕೊರೊನಾ ಸಂಕಷ್ಟವನ್ನು ಮೋದಿ ಸರ್ಕಾರ ಸಮರ್ಥವಾಗಿ ನಿಭಾಯಿಸಿದೆ. ಪ್ರಪಂಚದಲ್ಲಿಯೇ ಅತಿ ಕಡಿಮೆ ಜನರು ಮರಣ ಹೊಂದಿದ್ದಾರೆ. ಲಸಿಕೆ ವಿಚಾರದಲ್ಲಿ ಕಾಂಗ್ರೆಸ್ ರಾಜಕೀಯ ಮಾಡುತ್ತಿದೆ. ಜನರು ಕಾಂಗ್ರೆಸ್ ನಾಯಕರ ಮಾತು ಕೇಳಬಾರದು.
ಕೊರೊನಾ ಲಸಿಕೆ ಪಡೆದು ಆದಷ್ಟು ಬೇಗ ಕೊರೊನಾ ಮುಕ್ತ ದೇಶ ಮಾಡೋಣ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದರು.

ಬೆಳಗಾವಿಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಜನಸೇವಕ ಸಮಾರೋಪ ಸಮಾವೇಶದಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಬಿಜೆಪಿ ಕಾರ್ಯಕರ್ತರು ಇತಿಹಾಸ ಸೃಷ್ಟಿಸಿದ್ದಾರೆ. ಆ ಕಾರಣಕ್ಕೆ ನಾನು ಬೆಳಗಾವಿಗೆ ಬಂದಿದ್ದೇನೆ.
ಅತಿ ಹೆಚ್ಚು ಗ್ರಾಮ ಪಂಚಾಯತಿ ಸದಸ್ಯರನ್ನು ಚುನಾಯಿಸಿದ್ದಾರೆ.
ನರೇಂದ್ರ ಮೋದಿಯ ನಾಯಕತ್ವಕ್ಕೆ ಜನರು ಸಾಥ್ ನೀಡಿದ್ದಾರೆ ಎಂದು ಅಭಿಪ್ರಾಯ ಪಟ್ಟ ಅವರು, ಕಳೆದ 60 ವರ್ಷಗಳಲ್ಲಿ ಕಾಂಗ್ರೆಸ್ ಏನು ಮಾಡಿದೆ ಎಂದು ಪ್ರಶ್ನಿಸಿದರು.

ಪಂಡಿತ ನೆಹರೂವಿನಿಂದ ಹಿಡಿದು ಮನಮೋಹನ್ ಸಿಂಗ್ ವರೆಗೂ ಕಾಶ್ಮೀರ ವಶ ಮಾಡಿಕೊಳ್ಳಲು ಆಗಿಲ್ಲ. ತ್ರಿವಳಿ ತಲಾಕ್ ನಿಷೇಧಿಸಿದೆ. ಸರ್ಜಿಕಲ್ ಸ್ಟ್ರೈಕ್ ಏರ್ ಸ್ಟ್ರೈಕ್ ಮಾಡಿ ಪಾಕಿಸ್ತಾನದ ವೈರಿಗಳನ್ನು ಹೊಡೆದು ಉರುಳಿಸಿದ್ದೇವೆ.ಇನ್ನು ಕೆಲವೇ ತಿಂಗಳಲ್ಲಿ ಶ್ರೀರಾಮ ಮಂದಿರ ನಿರ್ಮಿಸುತ್ತೇವೆ ಎಂದು ಶಾ ತಿಳಿಸಿದರು.

ದೇಶದ ಅಭಿವೃದ್ಧಿಗಾಗಿ ಮೋದಿ ಸರ್ಕಾರ ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿದೆ. ಬಡವರ ಕಲ್ಯಾಣಕ್ಕಾಗಿ ಶ್ರಮಿಸುತ್ತಿದೆ. ಗ್ರಾಮೀಣ ಪ್ರದೇಶದ ಮನೆ ಮನೆಗೆ ಸಿಲಿಂಡರ್ ತಲುಪಿಸುವ ಕೆಲಸ ಮೋದಿ ಸರ್ಕಾರ ಮಾಡಿದೆ ಎಂದ ಅವರು, ನಾನು ಕಾಂಗ್ರೆಸ್ ನವರಿಗೆ ಕೇಳುತ್ತೇನೆ ‘ಯಾಕೆ ನೀವು ಸಿಲಿಂಡರ್ ತಲುಪಿಸಿಲ್ಲ, ಮನೆ ಕಟ್ಟಿಸಿಲ್ಲ, ಆಯುಷ್ಮಾನ್ ಮಾಡಲಿಲ್ಲ. ಏಕೆಂದರೆ, ಅವರಿಗೆ ದೇಶದಲ್ಲಿ ಬಡತನ ಹೋಗಲಾಡಿಸುವ ಉದ್ದೇಶ ಇರಲಿಲ್ಲ. ಬಡವರನ್ನು ಹೊಡೆದೋಡಿಸುವ ಉದ್ದೇಶವಿತ್ತು ಎಂದು ಗೃಹ ಸಚಿವ ಅಮಿತ್ ಶಾ ಕಾಂಗ್ರೆಸ್ ವಿರುದ್ಧ ಹರಿಹಾಯ್ದರು.


Spread the love

Related Posts

LEAVE A REPLY

Please enter your comment!
Please enter your name here

Stay Connected

0FansLike
3,792FollowersFollow
0SubscribersSubscribe
- Advertisement -spot_img

Latest Posts