ಬೆಳ್ಳಂಬೆಳಗ್ಗೆ ರಸ್ತೆಗಿಳಿದ ಹೋರಾಟಗಾರರು; ಪೊಲೀಸರ ಜೊತೆಗೆ ಮಾತಿನ ಚಕಮಕಿ

0
Spread the love

ವಿಜಯಸಾಕ್ಷಿ ಸುದ್ದಿ, ಗದಗ

ಮರಾಠ ಅಬಿವೃದ್ಧಿ ನಿಗಮ ರಚನೆ ವಿರೋಧಿಸಿ ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ನಗರದಲ್ಲಿಂದು ಬೆಳ್ಳಂಬೆಳಗ್ಗೆ ಜಯ ಕರ್ನಾಟಕ ಸಂಘಟನೆ ಕಾರ್ಯಕರ್ತರು ಬೀದಿಗಿಳಿದು ಪ್ರತಿಭಟನೆ ನಡೆಸಿದರು.

ನಗರದ ಮುಳಗುಂದ ನಾಕಾದಲ್ಲಿ ಮಾನವ ಸರಪಳಿ ನಿರ್ಮಿಸಿ ಗದಗ-ಹುಬ್ಬಳ್ಳಿ ರಸ್ತೆ ತಡೆದು ಕೈಗೆ ಕಪ್ಪು ಬಟ್ಟೆ ಧರಿಸಿ ಪ್ರತಿಭಟಿಸಿದರು. ಈ ಮೂಲಕ ಪ್ರತಿಭಟನೆಯ ಕಾವು ಜೋರಾಗಿತ್ತು.

ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕುತ್ತಿರುವ ಕನ್ನಡಪರ ಹೊರಾಟಗಾರರು ತಮಟೆ ಭಾರಿಸಿ, ಘೋಷಣೆ ಕೂಗುವ ಮೂಲಕ ಕನ್ನಡ ವಿರೋಧಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಮರಾಠ ಅಭಿವೃದ್ಧಿ ನಿಗಮ ಹಿಂಪಡೆಯುವಂತೆ ಆಗ್ರಹಿಸಿದ ಅವರು, ಬಾಯಿ ಬಾಯಿ ಬಡೆದುಕೊಂಡು ಬೊಬ್ಬೆ ಹೊಡೆದು ಹೋರಾಟ ನಡೆಸಿದರು.

ನಗರದ ಮುಳಗುಂದ ನಾಕಾದಲ್ಲಿ ಟೈರಿಗೆ ಬೆಂಕಿ ಹಚ್ಚಲು ಸಿದ್ಧತೆ ಮಾಡಿಕೊಂಡಿದ್ದ ಸಂಘಟನೆ ಕಾರ್ಯಕರ್ತರಿಂದ ನಗರಸಭೆ ಸಿಬ್ಬಂದಿಗಳಳು ಟೈರ್ ಗಳನ್ನು ವಶಕ್ಕೆ ಪಡೆದರು. ಗದಗ-ಹುಬ್ಬಳ್ಳಿ ರಸ್ತೆ ತಡೆ ವೇಳೆ ಪೊಲೀಸರು ಹಾಗೂ ಕಾರ್ಯಕರ್ತರ ನಡುವೆ ಕೆಲ ಹೊತ್ತು ಮಾತಿನ ಚಕಮಕಿ ನಡೆಯಿತು.

ಅದರಂತೆ ಮರಾಠ ಅಭಿವೃದ್ಧಿ ನಿಗಮ ರಚನೆ ವಿರೋಧಿಸಿ ಜಿಲ್ಲೆಯಲ್ಲಿ ಬಂದ್ ಆಚರಿಸುತ್ತಿರುವ ಹಿನ್ನೆಲೆಯಲ್ಲಿ ಅಹಿತರ ಘಟನೆಗಳು ಸಂಭವಿಸದಂತೆ ಎಲ್ಲೆಡೆ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

ಇನ್ನೂ ನಗರದಲ್ಲಿ ಬಸ್ ಸಂಚಾರ, ವಾಹನ ಓಡಾಟ, ಅಂಗಡಿ ಮುಂಗಟ್ಟುಗಳು ತೆರೆದಿದ್ದು, ಜನಜೀವನ ಎಂದಿನಂತೆ ಇದೆ.


Spread the love

LEAVE A REPLY

Please enter your comment!
Please enter your name here