ನಡುರಾತ್ರಿಯಲ್ಲಿ ಯುವಕನ ಹತ್ಯೆ; ಕೊಲೆ ಪಾತಕರು ಪರಾರಿ

0
Spread the love

ವಿಜಯಸಾಕ್ಷಿ ಸುದ್ದಿ, ಹುಬ್ಬಳ್ಳಿ

ಇಲ್ಲಿನ ಹೊರವಲಯದಲ್ಲಿ ಮಧ್ಯರಾತ್ರಿ ಯುವಕನೊರ್ವನನ್ನು ದುಷ್ಕರ್ಮಿಗಳು ಭೀಕರ ಹತ್ಯೆಗೈದಿರುವ ಘಟನೆ ಹುಬ್ಬಳ್ಳಿ-ಧಾರವಾಡ ಅವಳಿನಗರದಲ್ಲಿ ನಡೆದಿದೆ.

ಕೊಲೆಯಾದ ಯುವಕನನ್ನು ಹಳೆಹುಬ್ಬಳ್ಳಿಯ ನಿವಾಸಿ ಶಾರುಖ್ ಸೌದಾಗರ್ ಎಂದು ಗುರುತಿಸಲಾಗಿದೆ.
ಯುವಕನ ಮೇಲೆ ಮನಸ್ಸೊ ಇಚ್ಚೆ ದಾಳಿ ನಡೆಸಿರುವ
ದುಷ್ಕರ್ಮಿಗಳು ತೊಡೆ ಹಾಗೂ ಬೆನ್ನು ಮೂಳೆ ಮುರಿಯುವಂತೆ ಹಲ್ಲೆ ನಡೆಸಿ ಕೊಲೆ ಮಾಡಿದ್ದಾರೆ. ಬಳಿಕ ವಿದ್ಯಾನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶಾರುಖ್ ನ ಮೃತ ದೇಹ ಎಸೆದಿದ್ದಾರೆ.

ಕೆಲ ಮೂಲಗಳ ಪ್ರಕಾರ ನಟೋರಿಯಸ್ ಹಂತಕ ರೌಡಿಶೀಟರ್ ಸಲೀಂ ಬಳ್ಳಾರಿಯೇ ಈ ಕೊಲೆಯ ಪ್ರಮುಖ ಆರೋಪಿ ಎಂದು ಹೇಳಲಾಗುತ್ತಿದೆ. ಸಲೀಂ ಮೇಲೆ ರಾಜ್ಯದ ಬೇರೆ ಬೇರೆ ಜಿಲ್ಲೆಗಳ ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳಿವೆ. ಲಾಕ್ ಡೌನ್ ವೇಳೆ ಹೋಟೆಲ್ ತಿಂಡಿ ಕೊಡುವಂತೆ ಮಧ್ಯರಾತ್ರಿ ಪಿಡಿಸಿದ್ದ ಸಲೀಂನಿಗೆ ಸ್ಥಳೀಯರು ಧರ್ಮದೇಟು ನೀಡಿ ಕಸಬಾ ಪೇಟೆ ಪೊಲೀಸ್ ಠಾಣೆಗೆ ಒಪ್ಪಿಸಿದ್ದರು. ಜಾಮೀನಿನ ಮೇಲೆ‌ ಹೊರಬಂದ ಸಲೀಂ ತನ್ನ ಹಳೆ ಚಾಳಿ ಮುಂದುವರೆಸಿದ್ದಾನೆಂದು ತಿಳಿದು ಬಂದಿದೆ.

ಕೊಲೆಯಾಗಿರುವ ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು ಮರಣೋತ್ತರ ಪರೀಕ್ಷೆಗಾಗಿ ಕಿಮ್ಸ್ ಶವಗಾರದಲ್ಲಿ ಮೃತ ಯುವಕನ ಶವವನ್ನು ಇರಿಸಿದ್ದು, ಆರೋಪಿಗಳ ಪತ್ತೆಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.


Spread the love

LEAVE A REPLY

Please enter your comment!
Please enter your name here