22.8 C
Gadag
Saturday, December 9, 2023

ನದಿಯಲ್ಲಿ ಕೊಚ್ಚಿಹೋದ ವ್ಯಕ್ತಿ; ಕೊಣ್ಣೂರಿನ ಹಳೇ ಸೇತುವೆ ಬಳಿ ಘಟನೆ

Spread the love

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ನರಗುಂದ: ಸೇತುವೆ ದಾಟುವ ವೇಳೆ ವ್ಯಕ್ತಿಯೊಬ್ಬ ನದಿಯಲ್ಲಿ ಕೊಚ್ಚಿಹೋದ ಘಟನೆ ತಾಲೂಕಿನ ಕೊಣ್ಣೂರಿನ ಹಳೇ ಸೇತುವೆ ಬಳಿ ನಡೆದಿದೆ.

ಭಾರಿ ಮಳೆಯಾದ ಪರಿಣಾಮ ನದಿಗೆ ನೀರಿನ ಹರಿವು ಹೆಚ್ಚಾಗಿದೆ. ಇನ್ನು ಬೆಳಿಗ್ಗೆ ತೋಟಕ್ಕೆ ಹೋಗಿ ಮರಳುವ ವೇಳೆ ವೆಂಕನಗೌಡ ಸಾಲಿಗೌಡ್ರ ನೀರಿನ ಸೆಳೆತಕ್ಕೆ ಸಿಕ್ಕು ನದಿಯಲ್ಲಿ ಕೊಚ್ಚಿ ಹೋಗಿದ್ದಾರೆ.

ಭಾನುವಾರ ಸಂಜೆಯವರೆಗೂ ಅವರ ಮಾಹಿತಿ ಸಿಕ್ಕಿಲ್ಲ. ವಿಪತ್ತು ನಿರ್ವಹಣಾ ತಂಡದ ಸಿಬ್ಬಂದಿ ನದಿಗೆ ಬೋಟ್ ಇಳಿಸಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.


Spread the love

Related Posts

LEAVE A REPLY

Please enter your comment!
Please enter your name here

Stay Connected

0FansLike

Latest Posts