ನನಗೂ ಸಿಎಂ ಆಗೋ ಆಸೆ ಇದೆ! ಉಮೇಶ್ ಕತ್ತಿ ಹೊಸ ವರಸೆ

0
Spread the love

ವಿಜಯಸಾಕ್ಷಿ ಸುದ್ದಿ, ತುಮಕೂರು: ನನಗೆ ಹಾಗೂ ಯತ್ನಾಳ್ ಇಬ್ಬರಿಗೂ ಸೀನಿಯಾರಿಟಿ ಇದೆ. ಹೀಗಾಗಿ ನನಗೂ ಸಿಎಂ ಆಗವ ಆಸೆಯಿದೆ. ಸಿಎಂ ಸ್ಥಾನಕ್ಕೆ ನನಗೂ ಯತ್ನಾಳ್ ಗೂ ಪೈಪೋಟಿ ನಡೆಯಲಿದೆ ಎಂದು ಈಗಲೇ ಸಿಎಂ ಸ್ಥಾನದ ಆಸೆಯ ಸೂಚನೆಯನ್ನು ಉಮೇಶ್ ಕತ್ತಿ ನೀಡಿದ್ದಾರೆ.

ತುಮಕೂರಿನ ಸಿದ್ದಗಂಗಾ ಮಠದಲ್ಲಿ ಹೇಳಿಕೆ ನೀಡಿದ ಉಮೇಶ್ ಕತ್ತಿ, ಸದ್ಯಕ್ಕೆ ಸಿಎಂ ಸ್ಥಾನ ಖಾಲಿಯಿಲ್ಲ. 75 ವರ್ಷದವರೆಗೂ ಆಡಳಿತ ನಡೆಸಲು ಅವಕಾಶವಿದೆ. ಹೀಗಾಗಿ ನಾನೂ ಸಿಎಂ ಆಗಬಹುದು ಎಂದು ಹೊಸ ಬಾಂಬ್ ಸಿಡಿಸಿದ್ದಾರೆ.

ಸಿಎಂ ಬಿಎಸ್ ವೈ ನನಗೆ ವಿಶೇಷವಾದಂತಹ ಜವಾಬ್ದಾರಿ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಕೊಟ್ಟಿದ್ದಾರೆ. 4 ಕೋಟಿ 36 ಜನ್ರಿಗೆ ಆಹಾರ ನೀಡಲಾಗುತ್ತಿದೆ. ರಾಜ್ಯಕ್ಕೆ ಸರ್ಕಾರಕ್ಕೆ ಒಳ್ಳೆಯ ಹೆಸರು ತರುತ್ತೇನೆ. ಈ ಖಾತೆ ಸಿಕ್ಕಿರೋದಕ್ಕೆ ನಾನು ಖುಷಿಯಲ್ಲಿದ್ದೀನಿ,ಸಂತೋಷ ಆಗಿದೆ ಎಂದರು.

ನನಗೆ ಶ್ರೀಗಳ ಆಶೀರ್ವಾದವಿದೆ, ಮುಂದಿನ ದಿನಗಳಲ್ಲಿ ಯಾವ ಸ್ಥಾನ ಸಿಕ್ಕರೂ ನಿಭಾಯಿಸುತ್ತೆನೆ. ಜೀವನದಲ್ಲಿ ಸಿಎಂ ಆಗೋ ಆಸೆ ಎಲ್ಲರಿಗೂ ಇದೆ. ಸಿಎಂ ಆಗೋ ಆಸೆ ನನಗೂ ಇದೆ. ಸದ್ಯಕ್ಕೆ ಸಿಎಂ ಸ್ಥಾನ ಖಾಲಿ ಇಲ್ಲ ಎಂದರು.


Spread the love

LEAVE A REPLY

Please enter your comment!
Please enter your name here