ನವಲಗುಂದ ಸಿಪಿಐ ಡಿ.ಬಿ ಪಾಟೀಲ್ ಗೆ ರಾಷ್ಟ್ರಪತಿ ಪದಕ

0
Spread the love

ವಿಜಯಸಾಕ್ಷಿ ಸುದ್ದಿ, ನವಲಗುಂದ

ಪ್ರತಿ ವರ್ಷ ಸ್ವಾತಂತ್ರೋತ್ಸವದ ಸಂದರ್ಭದಲ್ಲಿ ಕೊಡಮಾಡುವ ರಾಷ್ಟ್ರಪತಿ ಪದಕ ಈ ವರ್ಷವೂ ಧಾರವಾಡ ಜಿಲ್ಲೆಯ ನವಲಗುಂದದ ಸರ್ಕಲ್ ಪೊಲೀಸ್ ಇನ್ಸ್‌ಪೆಕ್ಟರ್ ಡಿ. ಬಿ ಪಾಟೀಲ್ ಸೇರಿದಂತೆ ರಾಜ್ಯದ 18 ಜನ ಪೊಲೀಸ್ ಅಧಿಕಾರಿಗಳಿಗೆ ದೊರೆತಿದೆ.

ಸದ್ಯ ನವಲಗುಂದ ಠಾಣೆಯಲ್ಲಿ ಸಿಪಿಐ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಡಿ.ಬಿ ಪಾಟೀಲ್ ಅವರು ಸುಧೀರ್ಘ ಕಾಲ‌ ಇಲಾಖೆಯಲ್ಲಿ ಸಲ್ಲಿಸಿದ ಗಣನೀಯ ಸೇವೆ ಪರಿಗಣಿಸಿ ರಾಷ್ಟ್ರಪತಿ ಪದಕ ದೊರಕಿದೆ.

ಮೂಲತಃ ಬಾಗಲಕೋಟ ಜಿಲ್ಲೆಯವರಾದ ಡಿ.ಬಿ ಪಾಟೀಲ್, ಗದಗ ಜಿಲ್ಲೆಯ ಮುಂಡರಗಿ, ರೋಣ‌ ಹಾಗೂ ನರಗುಂದದಲ್ಲಿ ಸೇವೆ ಸಲ್ಲಿಸಿದ್ದಾರೆ.

ಸುಧೀರ್ಘ ಕಾಲ ಯಾವುದೇ ಕಪ್ಪುಚುಕ್ಕೆ ಇಲ್ಲದೆ ಸೇವೆ ಸಲ್ಲಿಸಿರುವ ಪಾಟೀಲರ ಸೇವೆ ಗುರುತಿಸಿ ದೇಶದ ಅತ್ಯುನ್ನತ ರಾಷ್ಟ್ರಪತಿ ಪದಕ ದೊರತಿದೆ.

ಧಾರವಾಡ ಜಿಲ್ಲೆಯ ಎಸ್ಪಿ ಜೆ ಲೋಕೇಶ್, ಡಿವೈಎಸ್ಪಿ ಎಮ್ ಎಸ್ ಸಂಕದ ಹಾಗೂ ಸಿಬ್ಬಂದಿಗಳು ಅಭಿನಂದಿಸಿದ್ದಾರೆ.

ಇನ್ಸ್‌ಪೆಕ್ಟರ್ ಡಿ.ಬಿ ಪಾಟೀಲ್ ಅವರಿಗೆ ರಾಷ್ಟ್ರಪತಿ ಪದಕ ದೊರೆತ ಸುದ್ದಿ ತಿಳಿದ ಗದಗ ಜಿಲ್ಲೆಯ ಅವರ ಸಿಬ್ಬಂದಿ ಸಂತಸಗೊಂಡಿದ್ದು, ಸೇವೆಯನ್ನು ಶ್ಲಾಘಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here