ನಾನು ದನದ ಮಾಂಸ ತಿನ್ನುತ್ತೇನೆ ಅದನ್ನ ಕೇಳೋದಕ್ಕೆ ಅವ್ರ್ಯಾರು? ಸಿದ್ದರಾಮಯ್ಯ ಪ್ರಶ್ನೆ

0
Spread the love

ವಿಜಯಸಾಕ್ಷಿ ಸುದ್ದಿ, ಬೆಂಗಳೂರು

ರಾಜ್ಯ ಸರ್ಕಾರ ಸುಗ್ರಿವಾಜ್ಞೆ ಮೂಲಕ ಗೋ ಹತ್ಯೆ ನಿಷೇಧ ಕಾಯ್ದೆ ಜಾರಿಗೊಳಿಸಿದ ಬೆನ್ನಲ್ಲೇ ಮಾಜಿ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಈ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿರುವ ಅವರು, ದನದ ಮಾಂಸ ಕೆಲವರ ಆಹಾರ ಪದ್ಧತಿ, ಅದನ್ನೇಕೆ ಪ್ರಶ್ನೆ ಮಾಡ್ತೀರಾ?. ಆಹಾರ ಆಯ್ಕೆ ಅವರವರ ಇಚ್ಛೆ ಅದನ್ನು ಕಟ್ಟಿಕೊಂಡು ಇವರಿಗೇನು? ಎಂದು ಪ್ರಶ್ನಿಸಿರುವ ಅವರು ನನ್ನ ಆಹಾರ ನನ್ನ ಹಕ್ಕು ಎಂದು ಹೇಳಿದ್ದಾರೆ.

ನಾನು ದನದ ಮಾಂಸ ತಿನ್ನುತ್ತೇನೆ ಅದನ್ನ ಕೇಳುವುದಕ್ಕೆ ಅವರು ಯಾರು? ಎಂದು ಬಹಿರಂಗವಾಗಿಯೇ ಗೋ ಹತ್ಯೆ ನಿಷೇಧ ಕಾಯ್ದೆಯನ್ನು ವಿರೋಧಿಸಿದ್ದಾರೆ ಎಂದು ವ್ಯಾಖ್ಯಾನಿಸಲಾಗುತ್ತಿದೆ.

ರವಿವಾರವಷ್ಟೇ ಮೈಸೂರು ಜಿಲ್ಲೆಯ ಸಿದ್ದರಾಮಯ್ಯನಹುಂಡಿಯಲ್ಲಿ ಹನುಮನ ಹುಟ್ಟಿದ ದಿನವನ್ನು ಕೇಳಿ ಸಿದ್ದರಾಮಯ್ಯ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದರು. ಬಿಜೆಪಿ ನಾಯಕರು ಮುಗಿ ಬಿದ್ದಿದ್ದರು. ಸಿದ್ದರಾಮಯ್ಯ ಹೇಳಿಕೆಗೆ ಪ್ರತಿರೋಧ ವ್ಯಕ್ತಪಡಿಸಿದ್ದರು.


Spread the love

LEAVE A REPLY

Please enter your comment!
Please enter your name here