ನಾಯಿಗೆ ಕಲ್ಲು ಹೊಡೆದಿದ್ದನ್ನು ಕೇಳಿದ ಮಾಲೀಕನ ಬರ್ಬರ ಹತ್ಯೆ

0
Spread the love

ವಿಜಯಸಾಕ್ಷಿ ಸುದ್ದಿ, ಕಲಬುರಗಿ

Advertisement

ಕ್ಷುಲ್ಲಕ ವಿಚಾರಕ್ಕೆ ಜಗಳ ನಡೆದು ವ್ಯಕ್ತಿಯೊಬ್ಬನನ್ನು ಬರ್ಬರವಾಗಿ ಹತ್ಯೆಗೈದ ಘಟನೆ ಕಲಬುರಗಿ ನಗರದ ಅಕ್ಕಮಹಾದೇವಿ ಕಾಲೋನಿಯಲ್ಲಿ ನಡೆದಿದೆ. ಗುರುರಾಜ್ ಕುಲಕರ್ಣಿ (35) ಕೊಲೆಯಾದ ವ್ಯಕ್ತಿ.

ಪಕ್ಕದ ಮನೆಯ ಪವನ್ ಜಾಗಿರದಾರ್ ಎಂಬಾತ ಗುರುರಾಜ್ ನ ಮನೆಯ ನಾಯಿಗೆ ಕಲ್ಲು ಹೊಡೆಯುತ್ತಿದ್ದ. ಇದೇ ವಿಚಾರಕ್ಕೆ ಎರಡು ತಿಂಗಳ ಹಿಂದೆ ಇಬ್ಬರ ಮಧ್ಯೆ ಗಲಾಟೆಯಾಗಿತ್ತು.

ನಿನ್ನೆ ರಾತ್ರಿ ಸಂಧಾನ ಮಾಡಿಕೊಳ್ಳಲು ಗುರುರಾಜ್‌ನನ್ನು ಕರೆಸಿಕೊಂಡಿದ್ದ ಪವನ್ ಜಾಗಿರದಾರ್, ತನ್ನ ಸ್ನೇಹಿತರೊಂದಿಗೆ ಸೇರಿ ಹತ್ತೆಗೈದಿದ್ದಾನೆ. ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

LEAVE A REPLY

Please enter your comment!
Please enter your name here