ವಿಜಯಸಾಕ್ಷಿ ಸುದ್ದಿ, ಕಾರವಾರ: ಚಿರತೆಯೊಂದು ಜನವಸತಿ ಪ್ರದೇಶದ ಬಳಿ ಓಡಾಟ ನಡೆಸಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಅಂಕೋಲಾದಲ್ಲಿ ನಡೆದಿದೆ.
Advertisement
ತಾಲೂಕಿನ ಕೊಂಡಳ್ಳಿ ಗ್ರಾಮದ ನಿವಾಸಿ ರಮಾನಂದ ಎನ್ನುವವರ ಮನೆಯ ಬಳಿ ಚಿರತೆ ಪ್ರತ್ಯಕ್ಷವಾಗಿದ್ದು ಸಿಸಿ ಕ್ಯಾಮೆರಾದಲ್ಲಿ ದೃಶ್ಯ ಸೆರೆಯಾಗಿದೆ. ಬೆಳಗಿನ ಜಾವದಲ್ಲಿ ನಾಯಿಗಳನ್ನು ಹಿಡಿಯಲು ಚಿರತೆ ಆಗಮಿಸಿದ್ದು ಈ ವೇಳೆ ನಾಯಿ ಸಿಗದೇ ಸಮೀಪದ ಗೂಡಿನಲ್ಲಿದ್ದ ಕೋಳಿಯನ್ನ ಕಚ್ಚಿಕೊಂಡು ಕಾಡಿನತ್ತ ಪರಾರಿಯಾಗಿದೆ.
ಮನೆಯವರು ಬೆಳಿಗ್ಗೆ ಕೋಳಿ ಇಲ್ಲದಿರುವುದನ್ನು ಗಮನಿಸಿದ ಬಳಿಕ ಸಿಸಿಟಿವಿ ಪರಿಶೀಲಿಸಿದ್ದು ಈ ವೇಳೆ ಚಿರತೆ ಓಡಾಟ ಕಂಡುಬಂದಿದೆ. ಜನವಸತಿ ಪ್ರದೇಶದ ಬಳಿ ಚಿರತೆ ಪ್ರತ್ಯಕ್ಷವಾಗಿರುವುದು ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದ್ದು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.