ವಿಜಯಸಾಕ್ಷಿ ಸುದ್ದಿ, ನವಲಗುಂದ:
Advertisement
ಇಲ್ಲಿಯ ಇಬ್ರಾಹಿಂಪೂರ ರಸ್ತೆಯಲ್ಲಿರುವ ಪುರಸಭೆಯ ಕಸ ಸಂಗ್ರಹ ಘಟಕದಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಕಟ್ಟಡ ಕಾರ್ಮಿಕನೊಬ್ಬ ಕಾಲು ಜಾರಿ ನೀರಿನ ಟ್ಯಾಂಕ್ನಲ್ಲಿ ಬಿದ್ದ ಪರಿಣಾಮ ಮೃತಪಟ್ಟ ಘಟನೆ ಶನಿವಾರ ಮಧ್ಯಾಹ್ನ ಸಂಭವಿಸಿದೆ.
ಗುತ್ತಿಗೆದಾರರ ಕೈಕೆಳಗೆ ಕೆಲಸ ಮಾಡುತ್ತಿದ್ದ ಈತ ಪಟ್ಟಣದ ಜಟಗಾ ಗಲ್ಲಿಯ ನಿವಾಸಿ ಗೂಡುಸಾಬ ಮಾಬುಸಾಬ ಶಿರೂರ (38) ಎಂದು ತಿಳಿದು ಬಂದಿದೆ.
ಸ್ಥಳಕ್ಕೆ ಮುಖ್ಯಾಧಿಕಾರಿ ಈರಪ್ಪ ಹಸಬಿ ಆಗಮಿಸಿ ಪ್ರಾಥಮಿಕ ವಿಚಾರಣೆ ಮಾಡಿದ್ದು, ನವಲಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಮೃತ ವ್ಯಕ್ತಿಯ ಶವವನ್ನು ಸರ್ಕಾರಿ ಆಸ್ಪತ್ರೆಯಲ್ಲಿ ಇಡಲಾಗಿದ್ದು ದುಡಿಯುವ ಮಗನನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಹೃದಯವಿದ್ರಾವಕವಾಗಿತ್ತು.