ವಿಜಯಸಾಕ್ಷಿ ಸುದ್ದಿ, ಕೋಲಾರ: ಗ್ರಾಮ ಪಂಚಾಯತಿಗೆ ನೂತನವಾಗಿ ಅಧ್ಯಕ್ಷರಾಗಿ ಆಯ್ಕೆಯಾದ ಸದಸ್ಯೆಯ ಮನೆಗೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಆರೋಪ ಕೇಳಿಬಂದಿದೆ.
ಚುನಾವಣೆ ಮುಗಿದರೂ ಅದರ ಕಾವು ಆರಿಲ್ಲ ಎನ್ನುವಂತಹ ಈ ಘಟನೆ ಕೋಲಾರ ಜಿಲ್ಲೆ ಮುಳಬಾಗಲು ತಾಲೂಕಿನ ರಾಜೆಂದ್ರಹಳ್ಳಿಯಲ್ಲಿ ನಡೆದಿದೆ.
![](http://vijayasakshi.com/wp-content/uploads/2021/02/img-20210206-wa01276608630304820019064.jpg)
ಶನಿವಾರ ನೂತನವಾಗಿ ಗ್ರಾಮಪಂಚಾಯತಿಗೆ ಅಧ್ಯಕ್ಷರಾಗಿ ಆಯ್ಕೆಯಾದ ನೂರ್ ಜಹಾನ್ ಎಂಬುವವರ ಮನೆಗೆ ಬೆಂಕಿ ಹಚ್ಚಲಾಗಿದೆ. ಇವರು ಮಾಜಿ ಶಾಸಕ ಕೊತ್ತೂರು ಮಂಜುನಾಥ್ ಬೆಂಬಲದಿಂದ ಅಧ್ಯಕ್ಷರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ, ವಿರೋಧಿ ಗುಂಪಿನವರು ಬೆಂಕಿ ಹಚ್ಚಿದ್ದಾರೆ ಎಂದು ನೂರ್ ಜಹಾನ್ ಆರೋಪ ಮಾಡಿದ್ದಾರೆ.
![](http://vijayasakshi.com/wp-content/uploads/2021/02/img-20210206-wa01248489474468611141395.jpg)
ಹೆಂಚಿನ ಮನೆಯಾಗಿರುವ ಹಿನ್ನೆಲೆಯಲ್ಲಿ, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಉದ್ದೇಶ ಪೂರ್ವಕವಾಗಿ ಕಿಟಕಿ ಮೂಲಕ ಒಣ ಹುಲ್ಲನ್ನು ಹಾಕಿ ಬೆಂಕಿ ಹಾಕಲಾಗಿದೆ.
ಸ್ಥಳಕ್ಕೆ ಮುಳಬಾಗಲು ಡಿವೈಎಸ್ಪಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಘಟನೆ ಕುರಿತು ನಂಗಲಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.