ವಿಜಯಸಾಕ್ಷಿ ಸುದ್ದಿ, ಬೆಂಗಳೂರು
ಕರ್ನಾಟಕ ಪಿಂಜಾರ್ ನದಾಫ್ ಮನ್ಸೂರಿ ಸಂಘಗಳ ಮಹಾಮಂಡಳದ ರಾಜ್ಯಾಧ್ಯಕ್ಷ ಹಾಗೂ ಪದಾಧಿಕಾರಿಗಳು ನೂತನವಾಗಿ ವಿಧಾನ ಪರಿಷತ್ತಿನ ಸಭಾಪತಿಯಾಗಿ ಆಯ್ಕೆಯಾಗಿರುವ ಶ್ರೀ ಬಸವರಾಜ ಹೊರಟ್ಟಿ ಅವರನ್ನು ಭೇಟಿ ಮಾಡಿ ಹೂಗುಚ್ಚ ನೀಡಿ ಅಭಿನಂದನೆ ಸಲ್ಲಿಸಿದರು.

ಇದೆ ವೇಳೆ ಪಿಂಜಾರ ನದಾಫ ಸಮುದಾಯದ ಎಲ್ಲ ಯುವಕರು ಸೇರಿ ಸಮುದಾಯದಕ್ಕೆ ಒಂದು ಒಳ್ಳೆಯ ಕೊಡುಗೆ ನೀಡಿ ಎಂದು ನೂತನ ಸಭಾಪತಿ ಸಲಹೆ ನೀಡಿದರು.
ಮಾಜಿ ಶಾಸಕ ಎನ್ ಎಚ್ ಕೋನರೆಡ್ಡಿ, ರಾಜ್ಯಾಧ್ಯಕ್ಷ ಡಾ. ಅಬ್ದುಲ್ ರಜಾಕ್ ನದಾಫ್, G.N.ತೋಟದ, ಜಿಲ್ಲಾ ಅಧ್ಯಕ್ಷ ಬಾಬಾ ಕಲ್ಮಲಾ, ಮಹಮ್ಮದ್ ಅಲಿ ಸೇರಿದಂತೆ ಇತರರು ಇದ್ದರು