ನೈಟ್ ಕರ್ಪ್ಯೂ ಬಗ್ಗೆ ಸರ್ಕಾರ ಗೊಂದಲದಲ್ಲಿರಲಿಲ್ಲ; ಸಚಿವ ಸಿ.ಸಿ.ಪಾಟೀಲ್ ಸ್ಪಷ್ಟನೆ

0
Spread the love

ವಿಜಯಸಾಕ್ಷಿ ಸುದ್ದಿ, ಗದಗ

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಜನ್ಮದಿನದ ಹಿನ್ನಲೆಯಲ್ಲಿ
ನಗರದ ಶ್ರೀನಿವಾಸ್ ಭವನದಲ್ಲಿ ಗಣಿ ಮತ್ರು ಭೂ ವಿಜ್ಞಾನ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಸರಳವಾಗಿ ಆಚರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು ಸಚಿವ ಸಿ.ಸಿ.ಪಾಟೀಲ್ ಅವರು, ಕರ್ಪ್ಯೂ ವಿಚಾರದಲ್ಲಿ ಸರ್ಕಾರದ ಮಟ್ಟದಲ್ಲಿ ಯಾವುದೇ ಗೊಂದಲವಿರಲಿಲ್ಲ. ರೂಪಾಂತರಗೊಂಡಿರುವ ಕೊರೊನಾ ವೈರಸ್ ಹರಡುವಿಕೆಯ ವೇಗ ಜಾಸ್ತಿ ಇದೆ.‌ಕ್ರಿಸ್ ಮಸ್ ಹಬ್ಬ, ಹೊಸ ವರ್ಷದ ಆಚರಣೆಯಲ್ಲಿ ಲೇಟ್ ನಿಂದ ಲೈಟ್ ವರಿಗೆ ಹೊರಗಡೆ ಓಡಾಡುತ್ತಾರೆ. ರಾತ್ರಿ ವೇಳೆ ಮೇನ್ ಬತ್ತಿ ಹಚ್ಚಿಕೊಂಡು ಡ್ಯಾನ್ಸ್ ಮಾಡುತ್ತಾರೆ. ಜನರು ಗುಂಪು ಗುಂಪಾಗಿ ಸೇರಿ ಮೋಜು ಮಸ್ತಿ ಮಾಡುತ್ತಾರೆ.
ಇದೆಲ್ಲವನ್ನು ತಪ್ಪಿಸುವ ಸಲುವಾಗಿ ಸರ್ಕಾರ ನೈಟ್ ಕರ್ಫ್ಯೂ ಜಾರಿ ಮಾಡಿತ್ತು ಎಂದು ರಾಜ್ಯ ಸರ್ಕಾರದ ನಿರ್ಧಾರವನ್ನು ಸಮರ್ಥಿಸಿಕೊಂಡರು.

ಹಲವಾರು ಸಂಘಟನೆ, ಬೇರೆ ಬೇರೆ ಪಕ್ಷಗಳ ಒತ್ತಡದಿಂದ ನೈಟ್ ಕರ್ಫ್ಯೂ ವಾಪಾಸ್ ಪಡೆಯಲಾಗಿದೆ. ಹಾಗಾಗಿ ಜನರು ಗುಂಪು ಗುಂಪಾಗಿ ಸೇರಬೇಡಿ. ಮೋಜು ಮಸ್ತಿಯಿಂದ ದೂರವಿರುವಂತೆ ಸಚಿವ ಸಿ.ಸಿ.ಪಾಟೀಲ್ ಮನವಿ ಮಾಡಿಕೊಂಡರು.

ಶಾಲೆ ಆರಂಭದ ಕುರಿತು ಪ್ರತಿಕ್ರಿಯಿಸದ ಅವರು, ಡಿ.28 ರಂದು ರಾಜ್ಯ ಸಚಿವ ಸಂಪುಟ ಸಭೆ ಇದೆ. ಅಲ್ಲಿ ನಿರ್ಣಯ ಮಾಡಲಾಗುತ್ತದೆ. ನಾನು ನನ್ನ ಅಭಿಪ್ರಾಯವನ್ನು ಸಚಿವ ಸಂಪುಟ ಸಭೆಯಲ್ಲಿ ಮಂಡಿಸುತ್ತೇನೆ
ಎಂದು ಸಚಿವ ಸಿ.ಸಿ.ಪಾಟೀಲ್ ಹೇಳಿದರು.


Spread the love

LEAVE A REPLY

Please enter your comment!
Please enter your name here