ಪಟ್ಟಣ ಪಂಚಾಯತ್ ಕಂಪ್ಯೂಟರ್ ಆಪರೇಟರ್ ಎಸಿಬಿ ಬಲೆಗೆ! ನಿಜಕ್ಕೂ ದುಡ್ಡು ಕೇಳಿದ್ಯಾರು?

0
Spread the love

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಕೊಪ್ಪಳ:
ಜಿಲ್ಲೆಯ ಕುಕನೂರು ಪಟ್ಟಣ ಪಂಚಾಯತ್ ಕಂಪ್ಯೂಟರ್ ಆಪರೇಟರ್ ಮೇಲೆ ಎಸಿಬಿ ಅಧಿಕಾರಿಗಳು ಶುಕ್ರವಾರ ದಾಳಿ ಮಾಡಿದ್ದಾರೆ. ಕಂಪ್ಯೂಟರ್ ಆಪರೇಟರ್ ಕುಮಾರಸ್ವಾಮಿ ಮಠದ 1 ಲಕ್ಷ ರೂಪಾಯಿ ನಗದು ಲಂಚವಾಗಿ ಪಡೆಯುವಾಗ ಎಸಿಬಿ ಅಧಿಕಾರಿಗಳು ದಾಳಿ ಮಾಡಿದ್ದಾರೆ.


ಗುತ್ತಿಗೆದಾರ ಅಕ್ತರಸಾಬ್ ಖಾಜಿ ಎಂಬುವರು ಕುಕನೂರು ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ವಿವಿಧ ಯೋಜನೆಯಡಿ 24 ಲಕ್ಷ ರೂಪಾಯಿ ಅನುದಾನದ ಕಾಮಗಾರಿ ನಿರ್ವಹಿಸಿದ್ದರೆ. ಇದರ ಬಿಲ್ ಪಾವತಿಗೆ ಒಟ್ಟು 3 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದು, ಮುಂಗಡವಾಗಿ 1 ಲಕ್ಷ ರೂಪಾಯಿ ಪಡೆಯುತ್ತಿದ್ದೇನೆ ಎಂದು ಕಂಪ್ಯೂಟರ್ ಆಪರೇಟರ್ ಒಪ್ಪಿಕೊಂಡಿದ್ದಾನೆ ಎನ್ನಲಾಗಿದೆ.


ಆದರೆ, ವಾಸ್ತವದಲ್ಲಿ ಕಂಪ್ಯೂಟರ್ ಆಪರೇಟರ್ ಕೇವಲ ನೆಪ ಮಾತ್ರ. ಈತನ ಮೂಲಕ ಪಟ್ಟಣ ಪಂಚಾಯತ್ ಜೂನಿಯರ್ ಇಂಜಿನಿಯರ್(ಜೆಇ) ಮತ್ತು ಮುಖ್ಯಾಧಿಕಾರಿಗಳು ಬೇಡಿಕೆ ಇಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಕಂಪ್ಯೂಟರ್ ಆಪರೇಟರ್ ನ ಸೂಕ್ತ ತನಿಖೆ ನಡೆಯಬೇಕಿದೆ ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ. ಎಸಿಬಿ ಬಳ್ಳಾರಿ ಎಸ್ಪಿ ಗುರುನಾಥ ಅವರ ನೇತೃತ್ವದಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.


Spread the love

LEAVE A REPLY

Please enter your comment!
Please enter your name here