ಪಶು ಆಸ್ಪತ್ರೆಗೆ ವೈದ್ಯರ ನೇಮಕಕ್ಕೆ ಆಗ್ರಹಿಸಿ ಕರವೇ ಕಾರ್ಯಕರ್ತರ ಪ್ರತಿಭಟನೆ

0
Spread the love

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಲಕ್ಷ್ಮೇಶ್ವರ: ಕಳೆದ ನಾಲ್ಕು ವರ್ಷಗಳಿಂದ ಪಶು ವೈದ್ಯರು ಇಲ್ಲದೇ ಜಾನುವಾರುಗಳು ಸಾವನ್ನಪ್ಪುತ್ತಿದ್ದ ಕೂಡಲೇ ಪಶು ವೈದ್ಯರನ್ನು ನಿಯೋಜಿಸುವಂತೆ ಒತ್ತಾಯಿಸಿ ತಾಲೂಕಿನ ಶಿಗ್ಲಿ ಗ್ರಾಮದಲ್ಲಿ ಕರವೇ‌ ಹಾಗೂ ಶ್ರೀರಾಮಸೇನಾ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಗ್ರಾಮದ ‌ಬಜಾರ್ ರಸ್ತೆ ಬಂದ್ ಮಾಡಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ಕೂಡಲೇ ವೈದ್ಯರನ್ನು ನೇಮಿಸುವಂತೆ ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಕರವೇ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶರಣು ಗೋಡಿ, ಈಗಾಗಲೇ ವೈದ್ಯರ ನೇಮಕಗೊಳಿಸಲು ಹಿರಿಯ ಅಧಿಕಾರಿಗಳಿಗೆ ಮನವಿ ಮಾಡಿಕೊಳ್ಳಲಾಗಿದೆ. ಆದರೂ ಇದುವರೆಗೂ ಪಶು ವೈದ್ಯರ ನೇಮಕ ಮಾಡಿಲ್ಲ. ಇದರಿಂದಾಗಿ ರೈತರಿಗೆ ಸಮಸ್ಯೆ ಆಗಿದ್ದು,ಅನಾರೋಗ್ಯ ಕ್ಕೀಡಾದ ಜಾನುವಾರುಗಳಿಗೆ ಸೂಕ್ತ ಚಿಕಿತ್ಸೆ ಸಿಗದೇ ಸಾವನ್ನಪ್ಪತ್ತಿವೆ. ಇದನ್ನು ಮನಗಂಡು ಅಧಿಕಾರಿಗಳು ವೈದ್ಯರ ನೇಮಕಗೊಳಿಸಬೇಕು. ಇನ್ನೂ ಹದಿನೈದು ದಿನಗಳಲ್ಲಿ ಶಿಗ್ಲಿ ಗ್ರಾಮದ ಪಶು ಆಸ್ಪತ್ರೆಗೆ ವೈದ್ಯರನ್ನು ನೇಮಕಗೊಳಸದೇ ಇದ್ದರೆ ತಹಸೀಲ್ದಾರ ಕಚೇರಿ ಎದುರು ಉಪವಾಸ ಸತ್ಯಾಗ್ರಹ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಪ್ರತಿಭಟನೆಯಲ್ಲಿ ಕರವೇ ಲಕ್ಷ್ಮೇಶ್ವರ ತಾಲೂಕು ಅಧ್ಯಕ್ಷ ನಾಗೇಶ್ ಅಮರಾಪೂರ, ಉಪಾಧ್ಯಕ್ಷ ಸುರೇಶ್, ಶಿಗ್ಲಿ ಗ್ರಾಮ ಘಟಕದ ಲುಕಮಾನ್ ಬೆಟಗೇರಿ, ಶ್ರೀರಾಮಸೇನಾ ಅಧ್ಯಕ್ಷ ಸಾಗರ ಅರಳಿಹಳ್ಳಿ, ಮಾಂತೇಶ್ ಅಡರಕಟ್ಟಿ ಸೇರಿದಂತೆ ಗ್ರಾಮದ ನೂರಾರು ರೈತರು ಪಾಲ್ಗೊಂಡಿದ್ದರು.


Spread the love

LEAVE A REPLY

Please enter your comment!
Please enter your name here