ಪಿಎಫ್‌ಐ ಬಾಲ ಬಿಚ್ಚಿದರೆ ಬಾಲನೂ ಕಟ್, ತಲೆನೂ ಕಟ್: ಸಿ.ಟಿ.ರವಿ ಪ್ರಚೋದನಕಾರಿ ಹೇಳಿಕೆ

0
Spread the love

ವಿಜಯಸಾಕ್ಷಿ ಸುದ್ದಿ, ಚಿಕ್ಕಮಗಳೂರು

ಪಿಎಫ್‌ಐ ಬಾಲ ಬಿಚ್ಚಿದರೆ ಬಾಲನೂ ಕಟ್, ತಲೆನೂ ಕಟ್ ಮಾಡಬೇಕಾಗುತ್ತದೆ ಎಂದು
ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ಕಟೀಲ್ ಕಚೇರಿ ಮೇಲೆ ಪಿಎಫ್‌ಐ ಕಾರ್ಯಕರ್ತರ ಮುತ್ತಿಗೆ ವಿಚಾರಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರಿನಲ್ಲಿ ಪ್ರತಿಕ್ರಿಯಿಸಿದ ಅವರು, ಜಾರಿ ನಿದೇಶನಾಲಯಕ್ಕೆ (ಇಡಿ) ತನಿಖೆ ಮಾಡಬೇಡವೆನ್ನಲೂ ಪಿಎಫ್‌ಐ ಯಾರು? ಎಂದು ಪ್ರಶ್ನಿಸಿದರು.

ಕುಂಬಳಕಾಯಿ ಕಳ್ಳ ಎಂದರೆ ಏಕೆ ಹೆಗಲು ಮುಟ್ಟಿಕೊಳ್ಳುವುದು. ಭಾರತವಿರುವುದು ಭಯೋತ್ಪಾದನೆ ಮಾಡಲು ಅಲ್ಲ ಎಂದು ಹೇಳಿದ ಅವರು, ಭಯೋತ್ಪಾದನೆಗೆ ವಿದೇಶದಿಂದ ಹಣ ಬರುವುದನ್ನು ತಡೆಯಲು ತನಿಖೆ ನೆಡೆಯಬೇಕಿದೆ ಎಂದು ಸಿ.ಟಿ.ರವಿ ಸ್ಪಷ್ಟಪಡಿಸಿದರು.


Spread the love

LEAVE A REPLY

Please enter your comment!
Please enter your name here