21.4 C
Gadag
Wednesday, September 27, 2023

ಪಿಎಸ್ಐಗಳ ವರ್ಗಾವಣೆ

Spread the love

ವಿಜಯಸಾಕ್ಷಿ ಸುದ್ದಿ ಕೊಪ್ಪಳ: ಬಳ್ಳಾರಿ, ರಾಯಚೂರು ಹಾಗೂ ಕೊಪ್ಪಳ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳ 9 ಜನ ಪಿಎಸ್ಐ‌ಗಳನ್ನು ಬಳ್ಳಾರಿ ವಲಯದ ಪೊಲೀಸ್ ಮಹಾ ನಿರೀಕ್ಷಕ ಎಂ.ನಂಜುಂಡಸ್ವಾಮಿ ವರ್ಗಾವಣೆಗೊಳಿಸಿ ಆದೇಶಿಸಿದ್ದಾರೆ.

ಬಳ್ಳಾರಿಯ ಸಿಇಎನ್ ಪೊಲೀಸ್ ಠಾಣೆಯ ಪಿಎಸ್ಐ ಶ್ರೀಮತಿ ಸರಳ.ಪಿ.ಅವರನ್ನು ಎಚ್.ಬಿ.ಹಳ್ಳಿ (ಅಪರಾಧ) ಪೊಲೀಸ್ ಠಾಣೆಗೆ, ಬಳ್ಳಾರಿ ಡಿಎಸ್ಎ ಘಟಕದ ಪಿಎಸ್ಐ ಶಿವಕುಮಾರ್ ನಾಯ್ಕ ಅವರನ್ನು ಕೊಪ್ಪಳ ಜಿಲ್ಲೆಯ ಅಳವಂಡಿ ಪೊಲೀಸ್ ಠಾಣೆಗೆ, ತೆಕ್ಕಲಕೋಟೆ ಪೊಲೀಸ್ ಠಾಣೆಯ ಪಿಎಸ್ಐ ತಿಮ್ಮಣ್ಣ ಅವರನ್ನು ಕುಷ್ಟಗಿ ಪೊಲೀಸ್ ಠಾಣೆಗೆ, ರಾಯಚೂರು ಜಿಲ್ಲೆಯ ನೇತಾಜಿ‌ನಗರ ಪೊಲೀಸ್ ಠಾಣೆಯ ಪಿಎಸ್ಐ ಶ್ರೀಮತಿ ಶೀಲಾ ಮೂಗನಗೌಡ್ರ ಅವರನ್ನು ಕೊಪ್ಪಳ ಜಿಲ್ಲೆಯ ಬೇವೂರು ಪೊಲೀಸ್ ಠಾಣೆಗೆವರ್ಗಾವಣೆ ಮಾಡಲಾಗಿದೆ.

ಇನ್ನು ಬೇವೂರು ಪೊಲೀಸ್ ಠಾಣೆಯ ಪಿಎಸ್ಐ ಶಂಕ್ರಪ್ಪ ಎಲ್. ಅವರನ್ನು ಕೊಪ್ಪಳ ಜಿಲ್ಲೆಯ ಸಿಇಎನ್ ಪೊಲೀಸ್ ಠಾಣೆಗೆ, ಬೇವೂರು ಠಾಣೆಗೆ ಆದೇಶದಲ್ಲಿದ್ದ ಪಿಎಸ್ಐ ಟಿ.ಜಿ.ನಾಗರಾಜ್ ಅವರನ್ನು ಚಿಗಟೇರಿ ಪೊಲೀಸ್ ಠಾಣೆಗೆ, ಕನಕಗಿರಿ ಪೊಲೀಸ್ ಠಾಣೆ ಪಿಎಸ್ಐ ಎಚ್.ಎಸ್.ಪ್ರಶಾಂತ ಅವರನ್ನು ಹಲವಾಗಲು ಪೊಲೀಸ್ ಠಾಣೆಗೆ, ಕುಷ್ಟಗಿ ಪೊಲೀಸ್ ಠಾಣೆಯ ಪಿಎಸ್ಐ ಚಿತ್ತರಂಜನ್ ಅವರನ್ನು ಬಳ್ಳಾರಿ ಜಿಲ್ಲೆಯ ಸಿಇಎನ್ ಪೊಲೀಸ್ ಠಾಣೆಗೆ ಹಾಗೂ ಕೊಪ್ಪಳ ಜಿಲ್ಲೆಯ ಸಿಇಎನ್ ಪೊಲೀಸ್ ಠಾಣೆಯ ಪಿಎಸ್ಐ ಡಿ.ಸುರೇಶ್ ಅವರನ್ನು ಕನಕಗಿರಿ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಲಾಗಿದೆ.


Spread the love

Related Posts

LEAVE A REPLY

Please enter your comment!
Please enter your name here

Stay Connected

0FansLike

Latest Posts

error: Content is protected !!