ವಿಜಯಸಾಕ್ಷಿ ಸುದ್ದಿ, ಗದಗ
Advertisement
ಪೆಟ್ರೋಲ್ ಟ್ಯಾಂಕರ್ ವಾಹನ ಹರಿದ ಪರಿಣಾಮ ಓರ್ವ ವ್ಯಕ್ತಿ ಸ್ಥಳದಲ್ಲಿಯೇ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ.
ಹುಬ್ಬಳ್ಳಿ ರಸ್ತೆಯ ಜಿಲ್ಲಾಡಳಿತ ಭವನದ ಎದುರಿಗೆ ಈ ದುರ್ಘಟನೆ ನಡೆದಿದೆ.
ಮೃತನನ್ನು ಒಕ್ಕಲಗೇರಿ ಓಣಿಯ ಮಹಾದೇವಪ್ಪ ಹುಚ್ಚಪ್ಪ ಕುಂಬಾರ ಎಂದು ಗುರುತಿಸಲಾಗಿದೆ. ಈ ಟ್ಯಾಂಕರ್ ಕೊಪ್ಪಳ ಮಾರ್ಗವಾಗಿ ಹೊರಟಿತ್ತು.
ಘಟನೆಯ ಮಾಹಿತಿ ತಿಳಿದ ಜಿಲ್ಲಾವರಿಷ್ಠಾಧಿಕಾರಿ ಯತೀಶ್ ಎನ್ ಸ್ಥಳಕ್ಕೆ ಭೇಟಿ ಕೊಟ್ಟು ಪರಿಶೀಲನೆ ನಡೆಸಿದರು.
ಸೈಕಲ್ ಮೇಲೆ ಕಟ್ಟಿಗೆ ಒಯ್ಯುತ್ತಿದ್ದ ವ್ಯಕ್ತಿಯು ಮನೆ ಕಡೆ ಹೊರಟಿದ್ದಾಗ ಟ್ಯಾಂಕರ್ ಚಾಲಕನ ನಿರ್ಲಕ್ಷ್ಯದಿಂದಾಗಿ ಈ ಅವಘಡ ನಡೆದಿದೆ. ಗದಗ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.