ಪೈಪ್ ಲೈನ್ ಒಡೆದು ನೀರು ಪೋಲು; ಬೆಳೆ ನಾಶದಿಂದ ರೈತ ಕಂಗಾಲು

0
Spread the love

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಮುಂಡರಗಿ: ಕುಡಿಯುವ ನೀರು ಸರಬರಾಜು ಮಾಡುವ ಪೈಪ್ ಲೈನ್ ಒಡೆದ ಪರಿಣಾಮ ಅಪಾರ ಪ್ರಮಾಣದ ನೀರು ಪೋಲಾಗಿ, ಬೆಳೆ ನಾಶವಾಗಿರುವ ಘಟನೆ ಪಟ್ಟಣದಲ್ಲಿ ನಡೆದಿದೆ.

ಪಟ್ಟಣದ ಕನಕರಾಯನಗುಡ್ಡದ ಪಕ್ಕದಲ್ಲಿ ಈ ಘಟನೆ ನಡೆದಿದ್ದು, ಪೈಪ್ ಲೈನ್ ಒಡೆದ ಪರಿಣಾಮ, ಪಕ್ಕದಲ್ಲಿದ್ದ ಜಮೀನುಗಳಿಗೆ ನೀರು ನುಗ್ಗಿ, ಅಲ್ಲಿ ಬೆಳೆದಿದ್ದ ಟೊಮೋಟೊ, ಬದನೆಕಾಯಿ ನೀರು ಪಾಲಾಗಿದೆ.

ಹಮ್ಮಗಿ ಬ್ಯಾರೇಜ್ ನಿಂದ ಗದಗ ಬೆಟಗೇರಿ ಅವಳಿ ನಗರಕ್ಕೆ 24×7 ಕುಡಿಯುವ ನೀರು ಸರಬರಾಜು ಮಾಡುವ ಪೈಪ್ ಲೈನ್ ಇದಾಗಿದೆ.

ಇನ್ನು ವಿಷಯ ತಿಳಿದ ನಂತರ ಸ್ಥಳಕ್ಕೆ ಬಂದ ನೀರು ಸರಬರಾಜು ಇಲಾಖೆ ಅಧಿಕಾರಿಗಳು ಪರಿಸ್ಥಿತಿ ನೋಡಿ ಸುಮ್ಮನೆ ತೆರಳಿದ್ದು ರೈತರ ಆಕ್ರೋಶಕ್ಕೆ ಕಾರಣವಾಗಿದೆ.

ಕಳೆದ ನಾಲ್ಕು ದಿನಗಳಿಂದಲೂ ನೀರು ಪೋಲಾಗುತ್ತಿದ್ದರೂ ಸರಿಪಡಿಸುವ ಕೆಲಸಕ್ಕೆ ಅಧಿಕಾರಿಗಳು ಮುಂದಾಗಿಲ್ಲ ಎನ್ನುವುದು ಸ್ಥಳೀಯರ ಆರೋಪವಾಗಿದೆ.


Spread the love

LEAVE A REPLY

Please enter your comment!
Please enter your name here