ಪೊಲೀಸ್ ಕಾನ್ಸ್‌ಟೇಬಲ್ ಮೇಲೆ ಕಾಂಗ್ರೆಸ್ ಶಾಸಕಿ ಸೌಮ್ಯಾರೆಡ್ಡಿ ದಬ್ಬಾಳಿಕೆ

0
Spread the love

ವಿಜಯಸಾಕ್ಷಿ ಸುದ್ದಿ, ಬೆಂಗಳೂರು: ಇಲ್ಲಿನ ಪ್ರೀಡಂ ಪಾರ್ಕ್ ನಲ್ಲಿ ಕಾಂಗ್ರೆಸ್ ಬೃಹತ್ ಪ್ರತಿಭಟನಾ ಸಮಾವೇಶ ನಡೆಸುತ್ತಿದ್ದು, ಈ ವೇಳೆ ಪೊಲೀಸರು ಕಾಂಗ್ರೆಸ್ ನಾಯಕರನ್ನು ವಶಕ್ಕೆ ಪಡೆಯಲು ಮುಂದಾಗಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರನ್ನು ವಶಕ್ಕೆ ಪಡೆದಿದ್ದಾರೆ.

ಈ ವೇಳೆ ಶಾಸಕಿ ಸೌಮ್ಯಾರೆಡ್ಡಿ ಅವರನ್ನು ಪೊಲೀಸರು ವಶಕ್ಕೆ ಪಡೆಯಲು ಯತ್ನಿಸಿದ ವೇಳೆ ಶಾಸಕಿ ಕಾರ್ಯನಿರತ ಮಹಿಳಾ ಪೊಲೀಸ್ ಕಾನ್ಸ್‌ಟೇಬಲ್ ಮೇಲೆ ಹಲ್ಲೆ ನಡೆಸಿದ್ದಾರೆ. ಅಲ್ಲದೇ, ಕರ್ತವ್ಯಕ್ಕೆ ಅಡ್ಡಿ ಪಡಿಸಿದ್ದಾರೆ.

ಅಲ್ಲದೇ, ಪೊಲೀಸರೊಂದಿಗೆ ಮಾತಿನ ಚಕಮಕಿ ನಡೆಸಿರುವ ಪೊಲೀಸರ ಮೇಲೆ ದೌವಲತ್ತು ಪ್ರದರ್ಶಿಸಿರುವ ಶಾಸಕಿ ಅಲ್ಲೇ ಇದ್ದ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಅವರಿಗೆ ದೂರು ನೀಡಿದ್ದಾರೆ.

ಕಳೆದ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದಾಗ ಶಾಸಕಿ ಸೌಮ್ಯಾರೆಡ್ಡಿಯವರ ತಂದೆಯಾಗಿರುವ ರಾಮಲಿಂಗಾರೆಡ್ಡಿಯವರು ಗೃಹ ಸಚಿವರಾಗಿದ್ದರು.

ಹಾಗಾಗಿ, ಅಂತಹ ಹಿರಿಯ ರಾಜಕಾರಣಿ ಹಾಗೂ ಮಾಜಿ ಗೃಹ ಮಂತ್ರಿಯ ಪುತ್ರಿ ಸೌಮ್ಯಾರೆಡ್ಡಿ ಅವರ ಸಭ್ಯತೆ‌ ಇದೆನಾ? ಎಂಬ ಪ್ರಶ್ನೆ ಎದ್ದಿದೆ. ಸದ್ಯ ಶಾಸಕರ ಈ ವರ್ತನೆಗೆ ವ್ಯಾಪಕ ಖಂಡ‌ನೆ ವ್ಯಕ್ತವಾಗುತ್ತಿದೆ.


Spread the love

LEAVE A REPLY

Please enter your comment!
Please enter your name here