HomeGadag Newsಪ್ರಜಾಪ್ರಭುತ್ವ ಬಲವರ್ಧನೆಗೆ ಕಾಂಗ್ರೆಸ್ ಪಕ್ಷ ಬೆಂಬಲಿಸಿ; ಡಿ.ಆರ್.ಪಾಟೀಲ್

ಪ್ರಜಾಪ್ರಭುತ್ವ ಬಲವರ್ಧನೆಗೆ ಕಾಂಗ್ರೆಸ್ ಪಕ್ಷ ಬೆಂಬಲಿಸಿ; ಡಿ.ಆರ್.ಪಾಟೀಲ್

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಗದಗ:

‘ಸ್ಥಳೀಯ ಆಡಳಿತ ಸಂಸ್ಥೆಗಳು ಪ್ರಜಾಸತ್ತಾತ್ಮಕ ವ್ಯವಸ್ಥೆಯ ಬುನಾದಿಯಾಗಿದ್ದು, ಇದು ಬಲಶಾಲಿಯಾಗಬೇಕು. ಇಲ್ಲಿಯ ಸಾಮಾನ್ಯ ಪ್ರಜೆಯೇ ವ್ಯವಸ್ಥೆಯ ಪ್ರಭು. ಈ ಪ್ರಭುವಿನ ಬದುಕು ಸುಂದರಗೊಳಿಸುವುದೇ ಪ್ರತಿನಿಧಿಯ ಕರ್ತವ್ಯವೆಂದು ನಂಬಿ ಅದನ್ನು ಸಾಕಾರಗೊಳಿಸುವುದೇ ಕಾಂಗ್ರೆಸ್ ಪಕ್ಷದ ಗುರಿಯಾಗಿದೆ ಎಂದು ಮಾಜಿ ಶಾಸಕ ಡಿ.ಆರ್.ಪಾಟೀಲ್ ಹೇಳಿದ್ದಾರೆ.

ಭಾನುವಾರ ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ‘ಗದಗ-ಬೆಟಗೇರಿ ಅವಳಿ ನಗರದಲ್ಲಿ ಜನಪರ ಕೆಲಸಗಳನ್ನು ಮಾಡುವ ಪರಂಪರೆ ಬೆಳೆಸಿದ ಹೆಗ್ಗಳಿಕೆ ಕಾಂಗ್ರೆಸ್ ಪಕ್ಷದ್ದಾಗಿದೆ. ರಾಜ್ಯದಲ್ಲಿಯೇ ಒಂದು ಆದರ್ಶ ವಸತಿ ವ್ಯವಸ್ಥೆ ಮಾಡಲಾಗಿದೆ. 60 ಕಿ.ಮೀ. ದೂರದಿಂದ ನದಿ ನೀರು ತಂದು ವಿತರಣೆ ಮಾಡಲಾಗುತ್ತಿದೆ. ಅವಳಿ ನಗರವನ್ನು ಕ್ರೀಡಾನಗರವನ್ನಾಗಿ ಮಾಡಲು ಬೇಕಾದ ಎಲ್ಲ ಅನುಕೂಲತೆಗಳನ್ನು ಸೃಷ್ಟಿಸಲಾಗಿದೆ.

ನಗರದ ಸಂಗೀತ, ಕಲೆ, ಸಾಹಿತ್ಯಿಕ, ಸಾಂಸ್ಕೃತಿಕ ಬದುಕನ್ನು ಶ್ರೀಮಂತಗೊಳಿಸಲು ಎಲ್ಲ ಅನುಕೂಲತೆ ಮಾಡಿದೆ. ಸಾರ್ವಜನಿಕ ನೈರ್ಮಲ್ಯ ಕಾಪಾಡುತ್ತ ಗೌರವ ಘಟಕಗಳನ್ನು ಸ್ಥಾಪಿಸಿ ದೇಶದಲ್ಲಿಯೇ ಖ್ಯಾತಿ ಗಳಿಸುವಂತೆ ಮಾಡಿದೆ ಎಂದು ತಿಳಿಸಿದ್ದಾರೆ.

ಅವಳಿ ನಗರದ ಎಲ್ಲ 35 ವಾರ್ಡಗಳಲ್ಲಿ ಚಾರಿತ್ರ್ಯವಂತ ಕ್ರೀಯಾಶೀಲ ಸೇವಾ ಮನೋಭಾವವುಳ್ಳವರನ್ನು ಆಯ್ಕೆ ಮಾಡಿ ಚುನಾವಣೆಗೆ ನಿಲ್ಲಿಸಿದ್ದು, ಪಕ್ಷದ ಎಲ್ಲ ಅಭ್ಯರ್ಥಿಗಳನ್ನು ಮತ ನೀಡುವ ಮೂಲಕ ಆಯ್ಕೆ ಮಾಡುವಂತೆ ಮಾಜಿ ಶಾಸಕ ಡಿ.ಆರ್.ಪಾಟೀಲ್ ಮನವಿ ಮಾಡಿದ್ದಾರೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!