36.4 C
Gadag
Friday, June 2, 2023

ಬಂದ್ ಗೆ ಬೆಂಬಲ ನೀಡಿದ ಗಜೇಂದ್ರಗಡ; ಬಿಕೋ ಎನ್ನುತ್ತಿವೆ ರಸ್ತೆಗಳು, ಪ್ರತಿಭಟನಾಕಾರರ ಬೈಕ್ ರ‌್ಯಾಲಿ

Spread the love

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗಜೇಂದ್ರಗಡ: ಭೂಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆ ತಿದ್ದುಪಡಿ ಕೈಬಿಡುವಂತೆ ಆಚರಿಸಲಾಗುತ್ತಿರುವ ಕರ್ನಾಟಕ ಬಂದ್ ಗೆ ಪಟ್ಟಣದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಪಟ್ಟಣದಲ್ಲಿ ವಿವಿಧ ಸಂಘಟನೆಗಳ ಸದಸ್ಯರು ಪ್ರತಿಭಟನೆ ನಡೆಸಿ ಕೇಂದ್ರ ಹಾಗೂ ರಾಕ್ಯಯ ಸರ್ಕಾರಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಬಂದ್ ಹಿನ್ನೆಲೆಯಲ್ಲಿ ಸಾರಿಗೆ ಸಂಚಾರ ಸ್ಥಬ್ದವಾಗಿದ್ದ ಪರಿಣಾಮ,ಪಟ್ಟಣದ ಬಸ್ ನಿಲ್ದಾಣ ಬಿಕೋ ಎನ್ನುತ್ತಿತ್ತು.

ಜನರಿಂದ ಗಿಜಿಗುಡುತ್ತಿದ್ದ ಕಾಲಕಾಲೇಶ್ವರ ವೃತ್ತ, ಜೋಡು ರಸ್ತೆಗಳಲ್ಲಿ ಸಂಚಾರ ವ್ಯವಸ್ಥೆ ಸ್ಥಬ್ದವಾಗಿತ್ತು, ಮಾರುವವರು ಕೊಳ್ಳುವವರು ಇಲ್ಲದೆ ಪಟ್ಟಣದ ಎಪಿಎಂಸಿ ಮಾರುಕಟ್ಟೆ ಖಾಲಿಯಾಗಿತ್ತು.

ಇನ್ನುಅಂಗಡಿ ಮುಂಗಟ್ಟುಗಳನ್ನು ತೆರೆಯದಂತೆ ಪ್ರತಿಭಟನಾಕಾರರು ಮನವಿ ಮಾಡಿದರು. ಪಟ್ಟಣದಲ್ಲಿ ಬೈಕ್ ರ‌್ಯಾಲಿ ನಡೆಸುವ ಮೂಲಕ ರೈತ ವಿರೋಧಿ ಮಸೂದೆ ಹಿಂಪಡೆಯುವಂತೆ ಪ್ರತಿಭಟನಾಕಾರರು ಆಗ್ರಹಿಸಿದರು.


Spread the love

Related Posts

LEAVE A REPLY

Please enter your comment!
Please enter your name here

Stay Connected

0FansLike
3,792FollowersFollow
0SubscribersSubscribe
- Advertisement -spot_img

Latest Posts