25.8 C
Gadag
Friday, June 9, 2023

ಬಸ್, ಕಾರ್ ಡಿಕ್ಕಿಗೆ ಓರ್ವ ಬಲಿ

Spread the love

ವಿಜಯಸಾಕ್ಷಿ ಸುದ್ದಿ, ಕಲಬುರಗಿ: ಬಸ್ ಮತ್ತು ಕಾರ್ ನಡುವೆ ಡಿಕ್ಕಿ ಸಂಭವಿಸಿದ ಪರಣಾಮ ಓರ್ವ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಡೆದಿದೆ.

ಜಿಲ್ಲೆಯ ಸೇಡಂ ತಾಲೂಕಿನ ಅಡಕಿ ಗ್ರಾಮದ ಬಳಿ ಈ ಘಟನೆ ನಡೆದಿದ್ದು, ಮೃತನನ್ನು ಕಾರ್ ನಲ್ಲಿದ್ದ ದೇವರಾಜ್(35) ಎಂದು ಗುರುತಿಸಲಾಗಿದೆ. ಮೃತ ದೇವರಾಜ್ ಸೇಡಂ ತಾಲೂಕಿನ ಹುಡಾ ಗ್ರಾಮದ ನಿವಾಸಿ ಎಂದು ತಿಳಿದುಬಂದಿದೆ.

ಘಟನೆಯಲ್ಲಿ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಕಲಬುರಗಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮುಧೋಳ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

Related Posts

LEAVE A REPLY

Please enter your comment!
Please enter your name here

Stay Connected

0FansLike
3,802FollowersFollow
0SubscribersSubscribe
- Advertisement -spot_img

Latest Posts