ಬಸ್ ತಡೆದು ಪ್ರತಿಭಟನೆ; ಕನ್ನಡಪರ ಹೋರಾಟಗಾರರ ಬಂಧನ

0
Spread the love

ವಿಜಯಸಾಕ್ಷಿ ಸುದ್ದಿ, ಗದಗ

Advertisement

ನಗರಾದ್ಯಂತ ಕರ್ನಾಟಕ ಬಂದ್ ಕ್ಷಣ ಕ್ಷಣಕ್ಕೂ ತೀವ್ರತೆ ಪಡೆದುಕೊಳ್ಳುತ್ತಿದೆ.

ಮರಾಠ ಅಭಿವೃದ್ಧಿ ಪ್ರಾಧಿಕಾರ ರದ್ದುಗೊಳಿಸುವಂತೆ ಆಗ್ರಹಸಿ ಪ್ರತಿಭಟನೆ ನಡೆಸುತ್ತಿದ್ದ ಕರವೇ ಜಿಲ್ಲಾಧ್ಯಕ್ಷ ಹನುಮಂತ ಅಬ್ಬಿಗೇರಿ ಸೇರಿದಂತೆ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿ ಕರೆದೋಯ್ದಿದ್ದಾರೆ.

ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದ ಕರವೇ ಕಾರ್ಯಕರ್ತರು, ದಿಢೀರನೇ ಡಿಸಿ ಕಚೇರಿಯ ಮುಂಭಾಗದಲದಲಿರುವ ಗದಗ-ಹುಬ್ಬಳ್ಳಿ ರಸ್ತೆ ಕಡೆ ಎದ್ದು ಬಂದು ಬಸ್ ತಡೆದಿದ್ದಾರೆ.

ಪೊಲೀಸರು ಎಷ್ಟೇ ಹೇಳಿದರು ಕೇಳದ ಕಾರ್ಯಕರ್ತರನ್ನು ಬಂಧಿಸಿ ಕೊನೆಗೆ ಪೊಲೀಸ್ ವಾಹನದಲ್ಲಿ ಕರೆದುಕೊಂಡು ಹೋಗಲಾಯಿತು.


Spread the love

LEAVE A REPLY

Please enter your comment!
Please enter your name here