ವಿಜಯಸಾಕ್ಷಿ ಸುದ್ದಿ, ಗದಗ
ನಗರದ ಹೃದಯ ಭಾಗದಲ್ಲಿ ಸುಮಾರು 5 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ನವೀಕೃತ ಬಸ್ ನಿಲ್ದಾಣವನ್ನು ಭಾನುವಾರ ಸಂಜೆ 4 ಗಂಟೆಗೆ ಉಪಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ ಉದ್ಘಾಟಿಸಲಿದ್ದಾರೆ.
ಜಿಲ್ಲೆಯ ಜನರ ಬೇಡಿಕೆಯಂತೆ ನವೀಕರಣಗೊಂಡಿರುವ ಹಳೇ ಬಸ್ ನಿಲ್ದಾಣಕ್ಕೆ ರಾಜ್ಯ ಸರ್ಕಾರ ಕಡೆಗೂ ಗಾನಯೋಗಿ ಪಂಡಿತ ಪುಟ್ಟರಾಜ ಗವಾಯಿಗಳ ಹೆಸಯ ನಾಮಕರಣ ಮಾಡಿದೆ.
![](http://vijayasakshi.com/wp-content/uploads/2021/01/img-20210123-wa00533817027329748880655.jpg)
ಆದರೆ, ಇಂದು ನಡೆಯುತ್ತಿರುವ ಬಸ್ ನಿಲ್ದಾಣದ ಲೋಕಾರ್ಪಣೆಗೆ ವೀರೇಶ್ವರ ಪುಣ್ಯಾಶ್ರಮದ ಕಲ್ಲಯ್ಯಜ್ಜನವರು ಹಾಗೂ ತೋಂಟದಾರ್ಯ ಮಠದ ಸಿದ್ದರಾಮ ಮಹಾಸ್ವಾಮೀಜಿ ಅವರನ್ನು ಆಹ್ವಾನ ಮಾಡದೇ ಜಿಲ್ಲಾಡಳಿತ ಹಾಗೂ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಅಪಮಾನವೆಸಗಿದೆ ಎಂದು ಉಭಯ ಮಠಗಳ
ಭಕ್ತರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
![](http://vijayasakshi.com/wp-content/uploads/2021/01/img-20210123-wa00788319982014266250859.jpg)
ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಪೋಸ್ಟ್ ಗಳು ಹರಿದಾಡುತ್ತಿವೆ. ಪುಟ್ಟಯ್ಯಜ್ಜನವರ ಬಸ್ ನಿಲ್ದಾಣದ ಲೋಕಾರ್ಪಣೆಗೆ ಅದೇ ಮಠದ ಪೀಠಾಧಿಪತಿಗಳನ್ನು ಆಹ್ವಾನಿಸದಿರುವುದು ಎಷ್ಟು ಸರಿ ಎಂದು ಜಿಲ್ಲೆಯ ಜನತೆ ಆಕ್ರೋಶ ಹೊರ ಹಾಕುತ್ತಿದ್ದಾರೆ.