25.8 C
Gadag
Friday, June 9, 2023

ಬಸ್ ನಿಲ್ದಾಣ ಉದ್ಘಾಟನೆ, ತೋಂಟದ ಶ್ರೀ, ಕಲ್ಲಯ್ಯಜ್ಜನವರಿಗಿಲ್ಲ ಆಹ್ವಾನ: ಭಕ್ತರ ಆಕ್ರೋಶ

Spread the love

ವಿಜಯಸಾಕ್ಷಿ ಸುದ್ದಿ, ಗದಗ

ನಗರದ ಹೃದಯ ಭಾಗದಲ್ಲಿ ಸುಮಾರು 5 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ನವೀಕೃತ ಬಸ್ ನಿಲ್ದಾಣವನ್ನು ಭಾನುವಾರ ಸಂಜೆ 4 ಗಂಟೆಗೆ ಉಪಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ ಉದ್ಘಾಟಿಸಲಿದ್ದಾರೆ.

ಜಿಲ್ಲೆಯ ಜನರ ಬೇಡಿಕೆಯಂತೆ ನವೀಕರಣಗೊಂಡಿರುವ ಹಳೇ ಬಸ್ ನಿಲ್ದಾಣಕ್ಕೆ ರಾಜ್ಯ ಸರ್ಕಾರ ಕಡೆಗೂ ಗಾನಯೋಗಿ ಪಂಡಿತ ಪುಟ್ಟರಾಜ ಗವಾಯಿಗಳ ಹೆಸಯ ನಾಮಕರಣ ಮಾಡಿದೆ.

ಆದರೆ, ಇಂದು ನಡೆಯುತ್ತಿರುವ ಬಸ್ ನಿಲ್ದಾಣದ ಲೋಕಾರ್ಪಣೆಗೆ ವೀರೇಶ್ವರ ಪುಣ್ಯಾಶ್ರಮದ ಕಲ್ಲಯ್ಯಜ್ಜನವರು ಹಾಗೂ ತೋಂಟದಾರ್ಯ ಮಠದ ಸಿದ್ದರಾಮ ಮಹಾಸ್ವಾಮೀಜಿ ಅವರನ್ನು ಆಹ್ವಾನ ಮಾಡದೇ ಜಿಲ್ಲಾಡಳಿತ ಹಾಗೂ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಅಪಮಾನವೆಸಗಿದೆ ಎಂದು ಉಭಯ ಮಠಗಳ
ಭಕ್ತರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಪೋಸ್ಟ್ ಗಳು ಹರಿದಾಡುತ್ತಿವೆ. ಪುಟ್ಟಯ್ಯಜ್ಜನವರ ಬಸ್ ನಿಲ್ದಾಣದ ಲೋಕಾರ್ಪಣೆಗೆ ಅದೇ ಮಠದ ಪೀಠಾಧಿಪತಿಗಳನ್ನು ಆಹ್ವಾನಿಸದಿರುವುದು ಎಷ್ಟು ಸರಿ ಎಂದು ಜಿಲ್ಲೆಯ ಜನತೆ ಆಕ್ರೋಶ ಹೊರ ಹಾಕುತ್ತಿದ್ದಾರೆ.


Spread the love

Related Posts

LEAVE A REPLY

Please enter your comment!
Please enter your name here

Stay Connected

0FansLike
3,802FollowersFollow
0SubscribersSubscribe
- Advertisement -spot_img

Latest Posts