ಬಸ್ ಬಂದ್: ರೈಲ್ವೆ ನಿಲ್ದಾಣದಲ್ಲಿ ಕಣ್ಣೀರು ಹಾಕಿದ ಮಹಿಳೆ

0
Spread the love

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ

ಸಾರಿಗೆ ಸಂಸ್ಥೆ ಬಸ್ ಸಂಚಾರ ಸ್ಥಗಿತವಾಗಿದ್ದಕ್ಕೆ ಊರಿಗೆ ಹೋಗಲು ಆಗದ ಮಹಿಳಾ ಪ್ರಯಾಣಿಕರೊಬ್ಬರು ಕಣ್ಣೀರು ಹಾಕಿದ್ದಾರೆ.

ನಗರದ ರೈಲು ನಿಲ್ದಾಣದಲ್ಲಿ ಕಣ್ಣೀರು ಹಾಕಿದ ಮಹಿಳೆ, ಗದಗನಿಂದ ಕೊಪ್ಪಳಕ್ಕೆ ಕುಟುಂಬ ಸಮೇತರಾಗಿ ಹೊರಟಿದ್ದರು. ನಿನ್ನೆ ಗದಗನ ಬಸ್ ನಿಲ್ದಾಣದಲ್ಲಿ ಬಸ್ ಗಾಗಿ ಕಾದು ಕಾದು ಸುಸ್ತಾಗಿ ಸಂಬಂಧಿಕರ ಮನೆಗೆ ತೆರಳಿದ್ದರು.

ಶನಿವಾರ ಬಸ್ ಮೂಲಕ ಕೊಪ್ಪಳಕ್ಕೆ ಹೋಗಲು ರೆಡಿಯಾಗಿದ್ದ ಕುಟುಂಬ ಬಸ್ ಸಂಚಾರ ಇವತ್ತೂ ಇಲ್ಲ ಎಂಬುದು ಗೊತ್ತಾಗಿದೆ‌. ಹಾಗಾಗಿ ಕೊಪ್ಪಳಕ್ಕೆ ಹೋಗಲು ರೈಲು ನಿಲ್ದಾಣಕ್ಕೆ ಆಗಮಿಸಿದ್ದಾರೆ.

ದಿಢೀರ್ ಪ್ರತಿಭಟನೆ ಮಾಡಿದರೆ ಸಣ್ಣ ಮಕ್ಕಳನ್ನು ಕಟ್ಟಿಕೊಂಡು ಹೇಗೆ ಹೋಗೋದು. ನಮ್ಮ ಸಂಬಂಧಿಕರು ಇದ್ದರು ಒಳ್ಳೆಯದಾಯಿತು. ಇಲ್ಲದಿದ್ದರೆ ನಮ್ಮ ಗತಿ ಏನಾಗಬೇಕು. ಪ್ರತಿಭಟನೆ ಮಾಡಿ. ಆದರೆ, ಯಾರಿಗೂ ತೊಂದರೆಯಾಗದಂತೆ ಮುಷ್ಕರ ಮಾಡಿ ಎಂದು ಮಹಿಳೆ ಕ್ಯಾಮೆರಾ ಮುಂದೆ ಕಣ್ಣೀರು ಹಾಕಿದ್ದಾರೆ.

ಸಾರಿಗೆ ಸಂಸ್ಥೆಯ ಬಸ್ ಸಂಚಾರ ಇಲ್ಲದಿರುವುದರಿಂದ ಪ್ರಯಾಣಿಕರು ರೈಲು ಪ್ರಯಾಣಕ್ಕೆ ಮುಂದಾಗಿದ್ದು, ಗದಗ ರೈಲು ನಿಲ್ದಾಣದಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಳವಾಗಿ ದೃಶ್ಯ ಕಂಡು ಬರುತ್ತಿದೆ.


Spread the love

LEAVE A REPLY

Please enter your comment!
Please enter your name here