ಬಸ್ ಸಂಚಾರ ಬಂದ್: ಪ್ರಯಾಣಿಕರಿಂದ ದುಪ್ಪಟ್ಟು ಹಣ ವಸೂಲಿ

0
Spread the love

ವಿಜಯಸಾಕ್ಷಿ ಸುದ್ದಿ, ಗದಗ

ಸಾರಿಗೆ ನೌಕರರ ಮುಷ್ಕರದ ಹಿನ್ನೆಲೆಯಲ್ಲಿ ಚಾಲಕರು ಮತ್ತು ನಿರ್ವಾಹಕರು ಕೇಂದ್ರ ಬಸ್ ನಿಲ್ದಾಣದಲ್ಲೇ ಬಸ್‌ಗಳನ್ನು ಬಿಟ್ಟು ಹೊರ ಹೋಗಿದ್ದಾರೆ. ಮುಷ್ಕರದ ಲಾಭ ಪಡೆದ ಖಾಸಗಿ ವಾಹನ, ಆಟೋ ಚಾಲಕರು ದುಪ್ಪಟ್ಟು ಹಣ ವಸೂಲಿಗಿಳಿದಿದ್ದಾರೆ.

ನಗರದ ಕೇಂದ್ರ ಬಸ್ ನಿಲ್ದಾಣದ ಬಳಿ ಪ್ರಯಾಣಿಕರಿಂದ ಬೇಕಾಬಿಟ್ಟಿ ಹಣ ವಸೂಲಿ ಮಾಡುತ್ತಿದ್ದು, ಆಟೋ ಚಾಲಕರು 10 ಕಿಲೋಮೀಟರ್ ಹೋಗಲು 200 ರೂಪಾಯಿ ವಸೂಲಿ ಮಾಡುತ್ತಿದ್ದಾರೆ. ಇನ್ನು ಕ್ರೂಸರ್ ವಾಹನಗಳ ಚಾಲಕರು ಎರಡು ಪಟ್ಟು ಹಣ ಪಡೆದುಕೊಳ್ಳುತ್ತಿದ್ದಾರೆ‌. ಇದರಿಂದ ಹೆಚ್ಚಿನ ಹಣವಿಲ್ಲದ ಬಡ ಪ್ರಯಾಣಿಕರು ಪರದಾಡುತ್ತಿದ್ದು, ಸರ್ಕಾರದ ವಿರುದ್ಧ ಹಿಡಿಶಾಪ ಹಾಕುತ್ತಿದ್ದಾರೆ.

ಖಾಸಗಿ ವಾಹನಗಳ ಅಟ್ಟಹಾಸಕ್ಕೆ ಕಡಿವಾಣ ಹಾಕುವಂತೆ ಪ್ರಯಾಣಿಕರು ಒತ್ತಾಯಿಸುತ್ತಿದ್ದು,
ಬಸ್ ಸಂಚಾರ ಇಲ್ಲದೇ ಪ್ರಯಾಣಿಕರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಇತ್ತ ಆಕ್ರೋಶಗೊಂಡಿರುವ ಪ್ರಯಾಣಿಕರನ್ನು ಸಮಾಧಾನಿಸಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ.

ಬಸ್ ಬಂದ್ ಬಗ್ಗೆ ಮೊದಲೇ ಯಾಕೆ ಮಾಹಿತಿ ನೀಡಿಲ್ಲ ಎಂದು ಕಿಡಿ ಕಾರಿರುವ ಪ್ರಯಾಣಿಕರು ಸಾರಿಗೆ ನಿಯಂತ್ರಣಾಧಿಕಾರಿ ಕಚೇರಿ ಬಳಿ ಜಮಾಯಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here