25.8 C
Gadag
Friday, June 9, 2023

ಬಾಲೆಹೊಸೂರಿನ ದಿಂಗಾಲೇಶ್ವರ ಮಠಕ್ಕೆ ಡಿಕೆಶಿ ಭೇಟಿ; ಅಂಗರಕ್ಷಕನಿಗೆ ತರಾಟೆ

Spread the love

ವಿಜಯಸಾಕ್ಷಿ ಸುದ್ದಿ, ಗದಗ

ಮೊದಲ ಬಾರಿಗೆ ಬಾಲೆಹೊಸೂರಿನ ಶ್ರೀದಿಂಗಾಲೇಶ್ವರ ಮಠಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ‌.ಕೆ.ಶಿವಕುಮಾರ್ ಭೇಟಿ ನೀಡಿ ದಿಂಗಾಲೇಶ್ವರ ಶ್ರೀಗಳ ಆಶೀರ್ವಾದ ಪಡೆದರು.

ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಬಾಲೆಹೊಸೂರ ಗ್ರಾಮದ ದಿಂಗಾಲೇಶ್ವರ ಮಠಕ್ಕೆ ಆಗಮಿಸಿದ ಡಿಕೆಶಿ ಅವರನ್ನು ಆರತಿ ಬೆಳಗಿ ಕಳಶದೊಂದಿಗೆ‌ ದಿಂಗಾಲೇಶ್ವರ ಮಠದ ಕಿರಿಯ ಶ್ರೀಗಳು ಸ್ವಾಗತಿಸಿದರು. ಅಭಿಮಾನಿಗಳು ಜಯ ಘೋಷ ಕೂಗಿದರು.

ಡಿಕೆಶಿ ಮಠಕ್ಕೆ ಆಗಮನದಿಂದ ನೂಕು ನುಗ್ಗಲು ಉಂಟಾಯಿತು. ಇದರಿಂದ ಕೋಪಗೊಂಡ ಡಿಕೆಶಿ
ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಅಂಗರಕ್ಷಕನಿಗೆ ತರಾಟೆ ತೆಗೆದುಕೊಂಡರು. ಜನರ ನೂಕಾಟ ನಿಯಂತ್ರಿಸುವಂತೆ ತಿಳಿಸಿದರು.

ಡಿ.ಕೆ.ಶಿವಕುಮಾರ್ ದಿಂಗಾಲೇಶ್ವರ ಮಠಕ್ಕೆ ಭೇಟಿ ನೀಡಿದ್ದು, ಶ್ರೀಗಳೊಂದಿಗೆ ಮಾತುಕತೆ ನಡೆಸಿದ್ದಾರೆ. ಇವರಿಬ್ಬರ ಭೇಟಿ ಮತ್ತು ಮಾತುಕತೆ ತೀವ್ರ ಕುತೂಹಲ ಮೂಡಿಸಿದೆ.


Spread the love

Related Posts

LEAVE A REPLY

Please enter your comment!
Please enter your name here

Stay Connected

0FansLike
3,802FollowersFollow
0SubscribersSubscribe
- Advertisement -spot_img

Latest Posts