20.9 C
Gadag
Monday, October 2, 2023

ಬಾವಿಯಲ್ಲಿ ಶವ ಪತ್ತೆ ಪ್ರಕರಣಕ್ಕೆ ಹೊಸ ಟ್ವಿಸ್ಟ್; ಕೊಲೆ ಮಾಡಿದ್ದವರೀಗ ಪೊಲೀಸರ ಅತಿಥಿ

Spread the love

ವಿಜಯಸಾಕ್ಷಿ ಸುದ್ದಿ, ಚಾಮರಾಜನಗರ: ಕಳೆದ ಕೆಲ ದಿನಗಳಿಂದ ಕಾಣೆಯಾಗಿದ್ದ, ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಮಧುವನಹಳ್ಳಿ ಗ್ರಾಮದ ನಿವಾಸಿ ಶಿವಮ್ಮ ಎಂಬಾಕೆಯ ಶವ ಬಾವಿಯಲ್ಲಿ ಪತ್ತೆಯಾದ ಪ್ರಕರಣಕ್ಕೀಗ ಹೊಸ ಟ್ವಿಸ್ಟ್ ಸಿಕ್ಕಿದೆ. ಈ ಪ್ರಕರಣಕ್ಕೆ ಸಂಬಂಧಿಸಂತೆ ಇಬ್ಬರು ಯುವಕರನ್ನು ಕೊಳ್ಳೇಗಾಲ ಗ್ರಾಮೀಣ ಪೊಲೀಸರು ಬಂಧಿಸಿದ್ದಾರೆ.

ಶಿವು ಹಾಗೂ ರಾಜು ಬಂಧಿತ ಆರೋಪಿಗಳಾಗಿದ್ದಾರೆ. ಕೆಲ ವರ್ಷಗಳ ಹಿಂದೆ ಮಧುವನಹಳ್ಳಿ ಗ್ರಾಮದ ಶಿವಮ್ಮ ನೆರೆ ಮನೆಯವರಾದ ನಂಜಮಣಿ ಎಂಬುವರಿಗೆ 1 ಲಕ್ಷ ರೂಪಾಯಿ ಸಾಲ ನೀಡಿದ್ದರು. ಕೊಟ್ಟಿದ್ದ ಸಾಲದ ಹಣವನ್ನು ವಾಪಸ್ ಕೇಳಿದಾಗ ನಂಜುಮಣಿ ಪದೇ ಪದೇ ನೆಪ ಹೇಳುತ್ತಿದ್ದರು ಎನ್ನಲಾಗಿದ್ದು, ಮೂರು ದಿನಗಳ ಹಿಂದೆ ಶಿವಮ್ಮ ಬಹಿರ್ದೆಸೆಗೆ ತೆರಳಿದ್ದ ವೇಳೆ ಕಾಲಿಗೆ ಕಲ್ಲು ಕಟ್ಟಿ ಗ್ರಾಮದ ಬಾವಿಗೆ ಬಿಸಾಡಿದ್ದಾರೆ ಎನ್ನಲಾಗಿದೆ.

ಶನಿವಾರ ಬಾವಿಯಲ್ಲಿ ಮೃತದೇಹ ಪತ್ತೆಯಾಗಿದ್ದು, ಸಾಲ ಪಡೆದಿದ್ದ ನಂಜಮಣಿಯ ಮಗ ಶಿವು ಹಾಗೂ ಸ್ನೇಹಿತ ರಾಜು ಎಂಬುವವರು ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿತ್ತು. ಈ ಹಿನ್ನೆಲೆ ಶಿವಮ್ಮ ಅವರ ಕುಟುಂಬಸ್ಥರೂ ದೂರು ನೀಡಿದ್ದರು.

ದೂರು ಬಂದ ಹಿನ್ನೆಲೆಯಲ್ಲಿ ಕೊಳ್ಳೇಗಾಲ ಗ್ರಾಮೀಣ ಪೊಲೀಸರು ಹತ್ಯೆ ಮಾಡಿರುವ ಶಂಕೆಯ ಮೇಲೆ ಶಿವು ಮತ್ತು ರಾಜು ಎಂಬ ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.


Spread the love

Related Posts

LEAVE A REPLY

Please enter your comment!
Please enter your name here

Stay Connected

0FansLike

Latest Posts

error: Content is protected !!