ಬಿಜೆಪಿಯಿಂದ ಅಭಿವೃದ್ಧಿ ಸಾಧ್ಯವಿಲ್ಲ: ಪಾಟೀಲ

0
Spread the love

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗಜೇಂದ್ರಗಡ
ಬಿಜೆಪಿ ನೇತೃತ್ವದ ಸರ್ಕಾರಗಳು ಭರವಸೆ ಮಾತ್ರ ನೀಡುತ್ತಿವೆ. ಅವುಗಳಿಂದ ಅಭಿವೃದ್ಧಿ ಸಾಧ್ಯವಿಲ್ಲ ಎನ್ನುವುದನ್ನು ಜನತೆ ಮನಗಂಡಿದ್ದಾರೆ. ಹೀಗಾಗಿ ಪದವೀಧರರ ಹಾಗೂ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದು ಕಾಂಗ್ರೆಸ್ ಗದಗ ಜಿಲ್ಲಾಧ್ಯಕ್ಷ ಜಿ.ಎಸ್. ಪಾಟೀಲ ಹೇಳಿದರು.
ಪಶ್ಚಿಮ ಪದವೀಧರರ ಚುನಾವಣೆಯಲ್ಲಿ ಪಟ್ಟಣದ ಮತ್ತಿಕಟ್ಟಿ, ಎಸ್.ಎಂ. ಭೂಮರಡ್ಡಿ, ಸರ್ಕಾರಿ ಪಾಲಿಟೆಕ್ನಿಕ್, ಮಹಾವೀರ ಕಾಲೇಜಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಾ. ಆರ್.ಎಂ. ಕುಬೇರಪ್ಪ ಪರವಾಗಿ ಪದವೀಧರರಲ್ಲಿ ಮತಯಾಚಿಸಿ ಮಾತನಾಡಿದರು.
ಚುನಾವಣೆ ಸಂದರ್ಭದಲ್ಲಿ ಜನತೆಗೆ ಬಿಜೆಪಿ ನಾಯಕರು ನೀಡುವ ಭರವಸೆಗಳು ಕಾರ್ಯಗತವಾಗುವುದಿಲ್ಲ ಎನ್ನುವುದಕ್ಕೆ 6 ವರ್ಷಗಳಲ್ಲಿ ಮೋದಿ ನೇತೃತ್ವದ ಸರ್ಕಾರದ ಆಡಳಿತ ವೈಖರಿಯೇ ಸಾಕ್ಷಿ. ಕಳೆದ ಬಾರಿ ಎಸ್.ವಿ. ಸಂಕನೂರು ಅವರಿಗೆ ನೀಡಿದ ಅವಕಾಶ ಬಳಕೆ ಮಾಡಿಕೊಳ್ಳುವಲ್ಲಿ ವಿಫಲವಾಗಿದ್ದಾರೆ ಎಂದು ಪದವೀಧರರು ಅರಿತುಕೊಂಡಿದ್ದಾರೆ. ಈ ಬಾರಿ ಎಲ್ಲ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿಗಣಲ್ಲು ಗೆಲ್ಲಿಸುವ ಮೂಲಕ ಜನತೆ ಬಿಜೆಪಿಗೆ ತಕ್ಕಪಾಠ ಕಲಿಸಲಿದ್ದಾರೆ ಎಂದರು.
ವೀರಣ್ಣ ಶೆಟ್ಟರ ಹಾಗೂ ಎಚ್.ಎಸ್. ಸೋಂಪುರ ಮಾತನಾಡಿ, ಬಿಜೆಪಿ ನೇತೃತ್ವದ ಸರ್ಕಾರಗಳು ರೈತರು, ಕಾರ್ಮಿಕರು ಸೇರಿ ಜನರ ಆಶಯಗಳಿಗೆ ವಿರುದ್ಧವಾಗಿರುವ, ಕಲಾಪಗಳಲ್ಲಿ ಬಿದ್ದು ಹೋಗಿದ್ದ ಕಾಯ್ದೆಗಳನ್ನು ಸುಗ್ರೀವಾಜ್ಞೆ ಮೂಲಕ ಜಾರಿ ಮಾಡುತ್ತಿದ್ದಾರೆ. ಪದವೀಧರರ ಸಮಸ್ಯೆಗಳಿಗೆ ಕಿಂಚಿತ್ತು ಬೆಲೆ ನೀಡದ ಮೋದಿ ಹಾಗೂ ಬಿಎಸ್‌ವೈ ಸರ್ಕಾರಗಳಿಗೆ ಎಚ್ಚರಿಕೆ ರವಾನಿಸಲು ಹಾಗೂ ಪದವೀಧರರ ಸಮಸ್ಯೆಗಳ ಪರಿಹಾರಕ್ಕಾಗಿ ಪ್ರಜ್ಞಾವಂತ ಯುವ ಸಮೂಹ ಕಾಂಗ್ರೆಸ್ ಬೆಂಬಲಿಸಿ ಡಾ. ಕುಬೇರಪ್ಪ ಅವರಿಗೆ ಪ್ರಥಮ ಪ್ರಾಶಸ್ತ್ಯದ ಮತ ನೀಡಬೇಕು ಎಂದರು.
ನರೇಗಲ್ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಬಿ.ಎಸ್. ಶೀಲವಂತರ, ಪುರಸಭೆ ಸದಸ್ಯರಾದ ಶಿವರಾಜ ಘೋರ್ಪಡೆ, ರಾಜು ಸಾಂಗ್ಲೀಕರ, ಮುರ್ತುಜಾ ಡಾಲಾಯತ, ಶರಣಪ್ಪ ಚಳಗೇರಿ, ಬಸವರಾಜ ಬಂಕದ, ಅಪ್ಪು ಮತ್ತಿಕಟ್ಟಿ ಇಮಾಮಸಾಬ ಬಾಗವಾನ, ವೀರಣ್ಣ ಸೊನ್ನದ, ಸಿದ್ದು ಗೊಂಗಡಶೆಟ್ಟಿಮಠ, ಅರ್ಜುನ ರಾಠೋಡ, ವೀರೇಶ ಸಂಗಮದ ಇದ್ದರು.


Spread the love

LEAVE A REPLY

Please enter your comment!
Please enter your name here