ಬಿಜೆಪಿ ಒಬಿಸಿ ಮೋರ್ಚಾ ಅಧ್ಯಕ್ಷನ ಮೇಲೆ ಹಲ್ಲೆ; ದುಷ್ಕರ್ಮಿಗಳ ಕೃತ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

0
Spread the love

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ವಿಜಯಪುರ: ಬಿಜೆಪಿ ಮುಖಂಡನ ಮೇಲೆ ಮಾರಣಾಂತಿಕ ಹಲ್ಲೆ ನಡೆದ ಘಟನೆ ಜಿಲ್ಲೆಯ ಸಿಂದಗಿಯಲ್ಲಿ ನಡೆದಿದೆ. ಸಿಂದಗಿ ತಾಲೂಕಿನ ಬಿಜೆಪಿ ಒಬಿಸಿ ಮೋರ್ಚಾ ಅಧ್ಯಕ್ಷ ರವಿಕಾಂತ ನಾಯ್ಕೋಡಿ ಮೇಲೆ ದುಷ್ಕರ್ಮಿಗಳಿಂದ ಮಾರಾಣಾಂತಿಕ ಹಲ್ಲೆ ನಡೆದಿದೆ.

ಸೋಮವಾರ ರಾತ್ರಿ ಸಿಂಧಗಿ ಪಟ್ಟಣದ ಹೊರವಲಯದ ಅರ್ಪಿತಾ ಧಾಬಾ ದಲ್ಲಿ ಈ ಘಟನೆ ನಡೆದಿದ್ದು, ಘಟನೆಯ ಕೆಲ ದೃಶ್ಯಗಳು ಸಿಸಿ ಟಿವಿಯಲ್ಲಿ ಸೆರೆ ಆಗಿವೆ. ರವಿಕಾಂತ ಮೇಲೆ ತಲವಾರ್ ನಿಂದ, ಧಾಬಾ ಸುತ್ತಲೂ ಓಡಾಡಿಸಿರುವ ದುಷ್ಕರ್ಮಿಗಳು ಹಲ್ಲೆ ಮಾಡಿದ್ದಾರೆ.

ಹಲ್ಲೆ ನಂತರ ದುಷ್ಕರ್ಮಿಗಳು ಬೈಕ್ ಮೇಲೆ ಪರಾರಿ ಅಗಿದ್ದಾರೆ. ಘಟನೆಯಲ್ಲಿ ರವಿಕಾಂತ ಎಡಗೈಗೆ ಗಾಯವಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾನೆ. ಬಬಲೇಶ್ವರ ಗ್ರಾಮದ ಅನಿಲ್, ರಾಂಪೂರ ಪಿ.ಎ ಗ್ರಾಮದ ಯುವರಾಜ ಸೇರಿದಂತೆ ನಾಲ್ವರ ಮೇಲೆ ಸಿಂಧಗಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಹಣದ ವ್ಯವಹಾರವೇ ಈ ಹಲ್ಲೆಗೆ ಕಾರಣ ಎನ್ನುವ ಮಾತುಗಳು ಕೇಳಿಬರುತ್ತಿವೆ.


Spread the love

LEAVE A REPLY

Please enter your comment!
Please enter your name here