27.3 C
Gadag
Wednesday, June 7, 2023

ಬಿಜೆಪಿ ಮಂತ್ರಿಗಳ ಮುಖಂಡತ್ವದಲ್ಲಿ ಮೂಜಗಂ ಮಠದ 500 ಕೋಟಿ ರೂ. ಆಸ್ತಿ‌ ನಾಶ, ಹಿಂದೂಗಳು ಎಷ್ಟೋ ಮಂದಿರ ದ್ವಂಸಗೊಳಿಸಿರುವ ಉದಾಹರಣೆಗಳಿವೆ: ದಿಂಗಾಲೇಶ್ವರಶ್ರೀ

Spread the love

ವಿಜಯಸಾಕ್ಷಿ ಸುದ್ದಿ, ಗದಗ

ಹಿಂದೂ ದೇವಾಸ್ಥಾನ ನಾಶ ಮಾಡಿದ ಮುಸ್ಲಿಂ ದೊರೆಗಳ ಬಗ್ಗೆ ನಾವು ಭಾಷಣ ಮಾಡುತ್ತೇವೆ. ಆದರೆ, ಹಿಂದೂಗಳೇ ಎಷ್ಟೋ ದೇವಾಲಯಗಳನ್ನು ನಾಶ ಮಾಡಿರುವ ಉದಾಹರಣೆಗಳು ನಮ್ಮ ಕಣ್ಣರದುರಿಗೆ ಇವೆ.
ಕೇವಲ ಪರ ಧರ್ಮಿಯರು ಮಂದಿರ ನಾಶಗೊಳಿಸಿದರಷ್ಟೇ ತಪ್ಪಲ್ಲ, ಸ್ವಧರ್ಮಿಯರು ನಾಶಗೊಳಿಸಿದರೂ ಅಷ್ಟೇ ತಪ್ಪು ಎಂದು ಬಾಲೆಹೊಸೂರಿನ ದಿಂಗಾಲೇಶ್ವರ ಶ್ರೀಗಳು ಅಭಿಪ್ರಾಯ ಪಟ್ಟರು.

ಅಯೋಧ್ಯೆಯ ಶ್ರೀರಾಮ ಮಂದಿರ ನಿರ್ಮಾಣ ಪ್ರಯುಕ್ತವಾಗಿ ಲಕ್ಷ್ಮೇಶ್ವರದಲ್ಲಿ ಶನಿವಾರ ಸಂಜೆ ನಡೆದ ನಿಧಿ ಸಮರ್ಪಣಾ ಅಭಿಯಾನದ ಧರ್ಮಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು.

ನಮ್ಮ ಶಕ್ತಿ, ಸಂಸ್ಕೃತಿ ನಾಶವಾದ ಹಾಗೆ, ನಮ್ಮ ದೇವಾಲಯಗಳು ಮಠಗಳು ನಾಶವಾಗಬಾರದು ಎಂಬುವುದಕ್ಕೆ ನೀವು ಒಂದು ಸಾರಿ ಬ್ರಿಟಿಷ್ ಮತ್ತು ಮುಸ್ಲಿಂ ದೊರೆಗಳ ಕುತಂತ್ರ ಓದಿಕೊಂಡಾಗ, ಯಾಕೆ ದೇವಾಲಯಗಳನ್ನು ರಕ್ಷಣೆ ಮಾಡಬೇಕು ಎಂಬುವುದು ಗೊತ್ತಾಗುತ್ತದೆ ಎಂದು ತಿಳಿಸಿದರು.

ಸದ್ಯಕ್ಕೆ ಹುಬ್ಬಳ್ಳಿ ಮೂರು ಸಾವಿರ ಮಠದ ಆಸ್ತಿ 500 ಕೋಟಿ ರೂ. ಹೋಗಿದೆ. ಅದು ಬಿಜೆಪಿ ಮಂತ್ರಿಗಳ ಮುಖಂಡತ್ವದಲ್ಲಿ ಹೋಗಿದ್ದು, ಅದಕ್ಕೆ ಓರ್ವ ಕಾಂಗ್ರೆಸ್ ಹಾಗೂ ಇನ್ನೋರ್ವ ಜೆಡಿಎಸ್ ಮುಖಂಡ ಸಾಥ್ ನೀಡಿದ್ದಾರೆ. ನಾವು ದೊಡ್ಡ ಪ್ರಮಾಣದಲ್ಲಿ ದೇವಾಲಯ, ಮಠಗಳನ್ನು ಉಳಿಸಬೇಕೆಂದು ಹೋರಾಟ ಮಾಡುತ್ತಿದ್ದೇವಲ್ಲಾ. ಮಕ್ಕಳಿಗೆ ಅನ್ನ ಹಾಕಿ, ವಿದ್ಯೆ ಕೊಟ್ಟ ಮಠದ 500 ಕೋಟಿ ರೂ. ನಾಶವಾಗಿದೆ. ನನ್ನ ಸಲುವಾಗಿ ನೂರು ತರಹದ ತಪ್ಪು ಕಲ್ಪನೆ ಬಿತ್ತರಿಸುತ್ತಿದ್ದಾರೆ. ಯಾರು ಈ ದೇಶದ ಇತಿಹಾಸದಲ್ಲಿ ಸಾರ್ವಜನಿಕ ಮಠ, ಮಂದಿರ, ಆಶ್ರಮಗಳನ್ನು ಉಳಿಸಬೇಕೆಂದು ಹೋಗುತ್ತಾರೆಯೋ ಅವರ ವಿರುದ್ಧ ಅಪಪ್ರಚಾರ ನಡೆಯುತ್ತದೆ ಎಂದರು.

ಈಗಾಗಲೇ ಸಾವಿರಾರು ದೇವಸ್ಥಾನಗಳು ನಾಶವಾಗಿವೆ. ಇನ್ನುಳಿದವುಗಳನ್ನು ಉಳಿಸಬೇಕೆಂದರೆ ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವ್ಯವಸ್ಥೆ ಪರಾಧೀನವಾಗದಂತೆ ಸರ್ಕಾರ ಕಾನೂನು ರೂಪಿಸಬೇಕು.
ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ಯಾವುದೇ ಸರ್ಕಾರವಾಗಿರಲಿ ನಮ್ಮ ದೇವಸ್ಥಾನದ ಆಸ್ತಿ ಮುಟ್ಟುವವರ ವಿರುದ್ಧ ಹೋರಾಟ ಆಗಲೇಬೇಕು ಎಂದು ದಿಂಗಾಲೇಶ್ವರ ಶ್ರೀಗಳು ಒತ್ತಾಯಿಸಿದರು.


Spread the love

Related Posts

LEAVE A REPLY

Please enter your comment!
Please enter your name here

Stay Connected

0FansLike
3,803FollowersFollow
0SubscribersSubscribe
- Advertisement -spot_img

Latest Posts