34.4 C
Gadag
Tuesday, March 28, 2023

ಬಿಜೆಪಿ ಸೇರುವ ಪ್ರಶ್ನೆಯೇ ಇಲ್ಲ; ಶಾಸಕ ಶ್ರೀನಿವಾಸಮೂರ್ತಿ

Spread the love

ವಿಜಯಸಾಕ್ಷಿ ಸುದ್ದಿ, ಬೆಂಗಳೂರು

ಮಾಜಿ ಕಾರ್ಪೋರೇಟರ್ ಜಾಕೀರ್ ಬಂಧನವಾಗಿರುವ ಬಗ್ಗೆ ಮಾಹಿತಿ ಇದ್ದು, ಇದರಿಂದ ನನಗೆ ನ್ಯಾಯ ಸಿಗುವ ಭರವಸೆ ಇದೆ ಎಂದು ಪುಲಕೇಶಿನಗರ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಹೇಳಿದರು.

ತಮ್ಮ ಡಿ.ಜೆ.ಹಳ್ಳಿಯಲ್ಲಿನ ಮನೆಯ ಮೇಲಿನ ದಾಳಿಯಿಂದಾಗಿ ಆತಂಕಕ್ಕೆ ಒಳಗಾಗಿದ್ದ ಶಾಸಕರು, ಮಾಜಿ ಕಾರ್ಪೊರೇಟರ್ ಜಾಕೀರ್ ಬಂಧನದ ವಿಚಾರವಾಗಿ ಬೆಂಗಳೂರಿನಲ್ಲಿ ಗುರುವಾರ
ಮಾತನಾಡಿದ್ದಾರೆ.

ಮಾಜಿ ಮೇಯರ್ ಸಂಪತ್ ರಾಜ್ ಮತ್ತು ಜಾಕೀರ್ ಅವರನ್ನು ಕಾಂಗ್ರೆಸ್ ಪಕ್ಷದಿಂದ ಉಚ್ಛಾಟಿಸುವಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಮನವಿ ಸಲ್ಲಿಸಿದ್ದೆ. ಅವರು ಶಿಸ್ತು ಸಮಿತಿಗೆ ವಹಿಸುವ ಭರವಸೆ ಕೊಟ್ಟಿದ್ದರು‌. ಆದರೆ ಅವರು ಈವರೆಗೆ ಡಿ.ಜೆ.ಹಳ್ಳಿ ಗಲಭೆ ಪ್ರಕರಣವನ್ನು ಶಿಸ್ತು ಸಮಿತಿಗೆ ವಹಿಸಿರುವ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ ಎಂದರು.

ಅಲ್ಲದೇ, ಇದು ನನ್ನ ಮನೆಗೆ ಸಂಬಂಧಿಸಿದ ವಿಷಯವಾಗಿದ್ದು, ಹಾಗಾಗಿ ನಾನು ಏಕಾಂಗಿಯಾಗಿ ಹೋರಾಡುತ್ತಿದ್ದೇನೆ. ಒಂದು ವೇಳೆ ಶಿಸ್ತು ಸಮಿತಿ ಸ್ಪಂದಿಸದಿದ್ದಲ್ಲಿ ಎಐಸಿಸಿಗೆ ಪತ್ರ ಬರೆಯುತ್ತೇನೆ. ಒಟ್ಟಿನಲ್ಲಿ ನನಗೆ ನ್ಯಾಯ ಸಿಗಬೇಕು. ತಪ್ಪಿತಸ್ಥರು ಯಾರೇ ಆಗಿದ್ದರೂ ಅವರಿಗೆ ಶಿಕ್ಷೆಯಾಗಬೇಕು ಎಂದು ಶಾಸಕ ಅಖಂಡ ಶ್ರೀನಿವಾಸಮೂರ್ತಿ ಆಗ್ರಹಿಸಿದ್ದಾರೆ.

ಕಾಂಗ್ರೆಸ್ ತೊರೆದು ಬಿಜೆಪಿ ಸೇರುತ್ತಾರೆ ಎಂಬ ಸುದ್ದಿಗಳಿಗೆ ಸ್ಪಷ್ಟನೆ ನೀಡಿದ ಶಾಸಕರು, ಅರವಿಂದ ಲಿಂಬಾವಳಿ ಅವರು ನನಗೆ ಸಂಬಂಧಿಕರು ಹಾಗಾಗಿ ನನಗೆ ಬೆಂಬಲ ನೀಡಿದ್ದಾರೆ. ನಾನು ಪಕ್ಷ ಬಿಡುವುದಿಲ್ಲ. ಬಿಜೆಪಿ ಸೇರುವ ಪ್ರಶ್ನೆ ಇಲ್ಲ. ನನ್ನ ತಂದೆ ಕಾಲದಿಂದ ನಾವು ಕಾಂಗ್ರೆಸ್ ಪಕ್ಷದಲ್ಲಿದ್ದೇವೆ. ಮುಂದೆಯೂ ಕಾಂಗ್ರೆಸ್ ನಲ್ಲಿಯೇ ಇರುತ್ತೇವೆ ಎಂದು ಶಾಸಕ ಅಖಂಡ ಶ್ರೀನಿವಾಸಮೂರ್ತಿ ಸ್ಪಷ್ಟನೆ ನೀಡಿದ್ದಾರೆ.


Spread the love

Related Posts

LEAVE A REPLY

Please enter your comment!
Please enter your name here

Stay Connected

0FansLike
3,749FollowersFollow
0SubscribersSubscribe
- Advertisement -spot_img

Latest Posts

error: Content is protected !!