27.8 C
Gadag
Friday, September 22, 2023

ಬುಲೆಟ್ ಪವ್ಯನಿಂದ ಚಾಕು ಇರಿತ; ನಕ್ಷತ್ರ ಹೋಟೆಲ್ ನಲ್ಲಿ ಘಟನೆ

Spread the love

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ: ಕುಡಿದ ನಶೆಯಲ್ಲಿ ಇಬ್ಬರು ಯುವಕರು ಸೇರಿ ಒಬ್ಬ ಯುವಕನಿಗೆ ಚಾಕು ಇರಿದ ಘಟನೆ ನಗರದ ನಕ್ಷತ್ರ ಹೋಟೆಲ್ ನಲ್ಲಿ ನಡೆದಿದೆ.

ಬೆಟಗೇರಿಯ ಹೆಲ್ತ್ ಕ್ಯಾಂಪ್ ನಿವಾಸಿ ನಿಖಿಲ್ ಮುದಗಲ್ ಇರಿತಕ್ಕೊಳಗಾಗಿದ್ದು, ಪವನ್ ಕುಮಾರ ಅಲಿಯಾಸ್ ಬುಲೆಟ್ ಪವ್ಯ ಹಾಗೂ ಪವನ್ ಸಕ್ರಿ ಅವರಿಬ್ಬರೂ ಸೇರಿ ಈ ಕೃತ್ಯವೆಸಗಿದ್ದಾರೆ.

ಚೂರಿ ಇರಿತಕ್ಕೊಳಗಾದ ನಿಖಿಲ್ ಶೌಚಾಲಯಕ್ಕೆ ಹೋಗುವಾಗ ಎದುರುಗಡೆಯಿಂದ ಬಂದ ಬುಲೆಟ್ ಪವ್ಯನಿಗೆ ಡಿಕ್ಕಿ ಹೊಡೆದಿದ್ದಾನೆ. ಇದರಿಂದ ಕುಪಿತಗೊಂಡ ಬುಲೆಟ್ ಪವ್ಯ ಹಾಗೂ ಪವನ್ ಸಕ್ರಿ ನಿಖಿಲ್ ನಿಗೆ ಚೂರಿ ಇರಿದು ಹಲ್ಲೆ ಮಾಡಿದ್ದಾರೆ.

ಚೂರಿ ಇರಿತಕ್ಕೊಳಗಾದ ನಿಖಿಲ್ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಗೆ ತೆರಳಿದ್ದಾನೆ. ಈ ಪ್ರಕರಣದಿಂದಾಗಿ ಗದಗ ನಗರದಲ್ಲಿ ಮತ್ತೆ ಮರಿ ಪುಡಾರಿಗಳು ಗರಿ ಬಿಚ್ಚಿದ್ದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಈ ಹಿಂದೆಯೂ ಮುಳಗುಂದ ರಸ್ತೆಯಲ್ಲಿ ವಿದ್ಯಾರ್ಥಿಗಳ ಮೇಲೆ ಹಲ್ಲೆ ಮಾಡಿದ್ದ ಎನ್ನಲಾಗಿದೆ. ಆದರೆ ಆಗ ಪೊಲೀಸರು ರಾಜಿ ಮಾಡಿಸಿ ಕಳಿಸಿದ್ದರು ಎಂದು ತಿಳಿದು ಬಂದಿದೆ. ನಿನ್ನೆ ನಡೆದ ಘಟನೆಯ ಕುರಿತು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿತರ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.


Spread the love

Related Posts

LEAVE A REPLY

Please enter your comment!
Please enter your name here

Stay Connected

0FansLike

Latest Posts

error: Content is protected !!