ವಿಜಯಸಾಕ್ಷಿ ಸುದ್ದಿ, ಹಾಸನ: ಬಿಜೆಪಿ ಬೆಂಬಲಿತ ಅಭ್ಯರ್ಥಿ ಪರವಾಗಿ ಗ್ರಾ.ಪಂ.ಚುನಾವಣೆಯಲ್ಲಿ ಕೆಲಸ ಮಾಡಿದ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತನ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಮಾರಗೊಂಡನಹಳ್ಳಿಯಲ್ಲಿ ನಡೆದಿದೆ.
ಅದೇ ಗ್ರಾಮದ ಎಂ.ಎನ್.ಮೂರ್ತಿ (50) ಕೊಲೆಯಾದ ವ್ಯಕ್ತಿಯಾಗಿದ್ದು, ದುಷ್ಕರ್ಮಿಗಳು ಕೊಲೆ ಮಾಡಿದ ನಂತರ ಬೆನ್ನಿಗೆ ಕಲ್ಲು ಕಟ್ಟಿ ಬಾವಿಗೆ ಎಸೆದಿದ್ದಾರೆ.
ಗ್ರಾ.ಪಂ. ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಪರವಾಗಿ ಕೆಲಸ ಮಾಡಿದ್ದೇ ಕೊಲೆಗೆ ಪ್ರಮುಖ ಕಾರಣ ಎನ್ನಲಾಗಿದ್ದು, ಪೊಲೀಸರ ತನಿಖೆಯಿಂದ ಸತ್ಯಾಸತ್ಯತೆ ಬಯಲಾಗಬೇಕಾಗಿದೆ. ಸ್ಥಳಕ್ಕೆ ಹೊಳೆನರಸೀಪುರ ಗ್ರಾಮೀಣ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.