ಬೆಳ್ಳಂಬೆಳಗ್ಗೆ ವ್ಯಕ್ತಿಯ ಬರ್ಬರ ಹತ್ಯೆ; ಮಚ್ಚಿನಿಂದ ತಲೆಗೆ ಹೊಡೆದು ದುಷ್ಕರ್ಮಿಗಳು ಪರಾರಿ

0
Spread the love

ವಿಜಯಸಾಕ್ಷಿ ಸುದ್ದಿ, ಯಾದಗಿರಿ

Advertisement

ಮಚ್ಚಿನಿಂದ ತಲೆಗೆ ಹೊಡೆದು ವ್ಯಕ್ತಿಯ ಬರ್ಬರ ಹತ್ಯೆ ಮಾಡಿದ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಗೋಗಿ ಗ್ರಾಮದಲ್ಲಿ ಇಂದು ಬೆಳಗಿನ ಜಾವ ನಡೆದಿದೆ.
ಕಾಸಿಂಸಾಬ್ ತಂದೆ ಚಾಂದಸಾಬ್ ಚೌದ್ರಿ ( 50 ) ಕೊಲೆಯಾದ ವ್ಯಕ್ತಿ.

ಕಾಸಿಂಸಾಬ್ ಗ್ರಾಮದಲ್ಲಿ ಚಿಕನ್ ಸೆಂಟರ್ ಹಾಗೂ ಮಜೀದ್ ಲ್ಲಿ ಅಕೌಟೆಂಟ್ ಆಗಿ
ಕಾರ್ಯನಿರ್ವಹಿಸುತ್ತಿದ್ದ. ಇಂದು ಬೆಳಗಿನ ಜಾವ 4 ಗಂಟೆಯ ಸುಮಾರು ಕಾಸಿಂಸಾಬ್ ನನ್ನು ಮನೆಯ ಹತ್ತಿರವೇ ದುಷ್ಕರ್ಮಿಗಳು
ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ಹತ್ಯೆಗೆ ‌ನಿಖರವಾದ ಕಾರಣ ತಿಳಿದು ಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಗೋಗಿ ಠಾಣೆ ಕ್ರೈಂ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಸೋಮಲಿಂಗಪ್ಪ ಸ್ಥಳಕ್ಕೆ ಭೇಟಿ ನೀಡಿ ಪರೀಶಿಲನೆ ನಡೆಸಿದರು.
ಗೋಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

LEAVE A REPLY

Please enter your comment!
Please enter your name here