25.7 C
Gadag
Wednesday, June 7, 2023

ಬೈಕ್ ಓವರ್ ಟೇಕ್ ಮಾಡಿದ್ದಕ್ಕೆ ಚಾಲಕನ ಮೇಲೆ ಮಾರಾಣಾಂತಿಕ ಹಲ್ಲೆ

Spread the love

ವಿಜಯಸಾಕ್ಷಿ ಸುದ್ದಿ, ಮೈಸೂರು: ಟ್ರಿಪಲ್ ರೈಡ್ ಹೋಗುತ್ತಿದ್ದ ಬೈಕ್ ವೊಂದನ್ನು ಓವರ್ ಟೆಕ್ ಮಾಡಿದ್ದಕ್ಕೆ, ಕೆಎಸ್ ಆರ್ ಟಿಸಿ ಚಾಲಕನಿಗರ ಮಾರಾಣಾಂತಿಕವಾಗಿ ಹಲ್ಲೆ ಮಾಡಿರುವ ಘಟನೆ ಜಿಲ್ಲೆಯ ಕೆ.ಆರ್.ನಗರ ತಾಲೂಕಿನ ಬೋಳನಹಳ್ಳಿ ಬಳಿ ನಡೆದಿದೆ.

ಹತ್ತಾರು ಜನರ ಎದುರೇ ಮಾರಕಾಸ್ತ್ರದಿಂದ ಚಾಲಕ ವೆಂಕಟೇಶ್ ಗೆ ಇರಿಯಲಾಗಿದೆ‌. ಬಸ್ ಹಾಸನದಿಂದ ಮೈಸೂರಿಗೆ ಬರುತ್ತಿತ್ತು. ಈ ವೇಳೆ ಟ್ರಿಪ್ಪಲ್ ರೈಡ್‌ನಲ್ಲಿದ್ದ ಬೈಕ್ ವೊಂದನ್ನು ಓವರ್ ಟೇಕ್ ಮಾಡಿದ್ದರು.

ಇದರಿಂದ ಕುಪಿತಗೊಂಡ ಬೈಕ್ ಸವಾರರು, ಬಹುದೂರದವರೆಗೂ ಬಸ್ ಫಾಲೋ ಮಾಡಿಕೊಂಡು ಬಂದು ಅಡ್ಡಗಟ್ಟಿ, ಬಸ್‌ನಿಂದ ಹೊಗೆ ಬಂತು ಅಂತ ಕ್ಯಾತೆ ತೆಗೆದರು. ನಂತರ ಪ್ರಯಾಣಿಕರ ಎದುರಲ್ಲೇ ಮಾತಿಗೆ ಮಾತು ಬೆಳೆಸಿ ಗಲಾಟೆ ಮಾಡಿ,ಪರಸ್ಪರ ಹೊಡೆದಾಡಿಕೊಂಡಿದ್ದಾರೆ.

ಸಾರಿಗೆ ಸಿಬ್ಬಂದಿ ಹಾಗೂ ಯುವಕರ ಜಗಳದ ವೇಳೆ, ಚಾಲಕ ವೆಂಕಟೇಶ್ ರಿಗೆ ಚಾಕುವಿನಿಂದ ಚುಚ್ಚಿ ಹಲ್ಲೆ ನಡೆಸಿದ್ದಾರೆ. ಘಟನೆಯಲ್ಲಿ ಚಾಲಕ ವೆಂಕಟೇಶ್‌ಗೆ ಗಂಭೀರ ಗಾಯಗಳಾಗಿದ್ದು, ಕೂಡಲೇ ಪ್ರಯಾಣಿಕರು ಮೈಸೂರಿನ ಖಾಸಗಿ ಆಸ್ಪತ್ರೆಗೆ ಸಾಗಿಸಿದ್ದಾರೆ‌.

ಪಿರಿಯಾಪಟ್ಟಣ ಡಿಪೋಗೆ ಸೇರಿದ‌ ಬಸ್ ಇದಾಗಿದ್ದು, ಆರೋಪಿಗಳ ಬಗ್ಗೆ ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದು, ಬಿಳಿಕೆರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

Related Posts

LEAVE A REPLY

Please enter your comment!
Please enter your name here

Stay Connected

0FansLike
3,803FollowersFollow
0SubscribersSubscribe
- Advertisement -spot_img

Latest Posts