ಬೈಕ್ ಗೆ ಸರಕಾರಿ ವಾಹನ ಡಿಕ್ಕಿ; ಸ್ಥಳದಲ್ಲೇ ಇಬ್ಬರ ದುರ್ಮರಣ

0
Spread the love

ವಿಜಯಸಾಕ್ಷಿ ಸುದ್ದಿ, ಹಾವೇರಿ

ಸರ್ಕಾರಿ ಅಧಿಕಾರಿಯೊಬ್ಬರ ಬೊಲೆರೋ ವಾಹನವೊಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ
ಬೈಕ್‌ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬ್ಯಾಡಗಿ ತಾಲ್ಲೂಕಿನ ಕದಮನಹಳ್ಳಿ ಗ್ರಾಮದ ಬಳಿ ನಡೆದಿದೆ.

ಹಾವೇರಿ ತಾಲ್ಲೂಕಿನ ಗಣಜೂರು ಗ್ರಾಮದ ಮಂಜು ಸೋಮನಕಟ್ಟಿ (37) ಹಾಗೂ ಬಸವರಾಜ್ ವಾಲ್ಮೀಕಿ (40) ಮೃತ ದುರ್ದೈವಿಗಳಾಗಿದ್ದಾರೆ.

ಮೃತರು ಹೊನ್ನತ್ತಿ ಮತ್ತು ಕದರಮಂಡಲಗಿ ದೇವಸ್ಥಾನಕ್ಕೆ ಹೋಗಿ ದೇವರ ದರ್ಶನ ಪಡೆದು ವಾಪಸ್ಸು ಆಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.

ಹಾವೇರಿಯಿಂದ ರಾಣೆಬೆನ್ನೂರು ಕಡೆ ಹೊರಟಿದ್ದ ಭೂ ದಾಖಲೆಗಳ ಸಹಾಯಕ ನಿರ್ದೇಶಕರ ಸರ್ಕಾರಿ ಬೊಲೆರೋ ವಾಹನ ವಾಹನ ಬೈಕ್ ಗೆ ಡಿಕ್ಕಿ ಹೊಡೆದಿದೆ.

ಬ್ಯಾಡಗಿ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here