25.8 C
Gadag
Friday, June 9, 2023

ಬ್ಲೇಡ್ ನಿಂದ ಕುತ್ತಿಗೆ ಕೊಯ್ದುಕೊಂಡ ವ್ಯಕ್ತಿ : ಸಾವು ಬದುಕಿನ ಮಧ್ಯೆ ಸೆಣಸಾಡುತ್ತಿದವನ ಜೀವ ರಕ್ಷಿಸಿದ 108 ಸಿಬ್ಬಂದಿ

Spread the love

ವಿಜಯಸಾಕ್ಷಿ ಸುದ್ದಿ, ಗದಗ: ಬ್ಲೇಡ್ ನಿಂದ ಕುತ್ತಿಗೆ ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯನ್ನು 108 ಸಿಬ್ಬಂದಿಗಳು ರಕ್ಷಿಸಿರುವ ಘಟನೆ ನಗರದ ರಾಜೀವ್ ಗಾಂಧಿ ನಗರದಲ್ಲಿ ರವಿವಾರ ನಡೆದಿದೆ.

ರಾಜೀವ್ ಗಾಂಧಿ ನಗರದ ನಿವಾಸಿ ಚನ್ನಬಸಪ್ಪ ವೀರಪ್ಪ ತಳಕಲ್(35) ಆತ್ಮಹತ್ಯೆಗೆ ಯತ್ನಿಸಿದವರಾಗಿದ್ದು, 108 ಸಿಬ್ಬಂದಿಗಳಾದ ಇಎಂಟಿ ಮಹೇಶ್ ಭಜಂತ್ರಿ ಹಾಗೂ ಪೈಲೆಟ್ ಅಶೋಕ ನೀಲಗಾರ ರಕ್ಷಿಸಿದ್ದಾರೆ.

ಮನೆಯ ಒಂದನೇ ಮಹಡಿಯಲ್ಲಿ ಚನ್ನಬಸಪ್ಪ ಬ್ಲೇಡ್ ನಿಂದ ಕುತ್ತಿಗೆ ಭಾಗದ ಶ್ವಾಸನಾಳದವರೆಗೆ (ಟ್ರಾಕಿಯಾ) ಕೊಯ್ದುಕೊಂಡ ಪರಿಣಾಮ, ತೀವ್ರ ರಕ್ತಸ್ರಾವದಿಂದ ಅರೆ ಪ್ರಜ್ಞಾವಸ್ಥೆ ಸ್ಥಿತಿಯಲ್ಲಿ ಬಳಲುತ್ತಿದ್ದ. ತಕ್ಷಣವೇ ಕುತ್ತಿಗೆಯ ಭಾಗಕ್ಕೆ ಡ್ರೆಸ್ಸಿಂಗ್ ಮಾಡಿ ರಕ್ತಸ್ರಾವ ಹತೋಟಿಗೆ ತಂದಿದ್ದಾರೆ.

ಬಳಿಕ ಸ್ಥಳೀಯರ ನೆರವಿನಿಂದ 1 ನೇ ಮಹಡಿಯಿಂದ ಸ್ಪೈನ್ ಬೋರ್ಡ್ ಮುಖಾಂತರ 108 ಒಳಗೆ ಸ್ಥಳಾಂತರಿಸಿದ್ದಾರೆ. ಆ್ಯಂಬುಲೆನ್ಸ್ ನಲ್ಲಿಯೇ ಇಎಂಟಿ ಮಹೇಶ್ ಅವರು ಐವಿ ಫ್ಲೂಯಿಡ್, ಎನ್ಎಸ್, ಆಕ್ಸಿಜನ್, ರಕ್ತದೊತ್ತಡ ಪರೀಕ್ಷಿಸಿ ಆಸ್ಪತ್ರೆಯವರೆಗೂ ಆಂಬುಲೆನ್ಸ್ ನಲ್ಲಿ ಆರೈಕೆ ಮಾಡಿದ್ದು, ಚಿಕಿತ್ಸೆಗಾಗಿ ನಗರದ ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸದ್ಯ ಚನ್ನಬಸಪ್ಪ ಮಾತನಾಡಲಾಗದ ಸ್ಥಿತಿಯಲ್ಲಿ ಇರುವುದರಿಂದ ಆತ್ಮಹತ್ಯೆಗೆ ಯತ್ನಿಸಿರುವ ಬಗ್ಗೆ ನಿಖರವಾದ ಮಾಹಿತಿ ತಿಳಿದು ಬಂದಿಲ್ಲ. ಕುಟುಂಬದವರು ಹೇಳುವ ಪ್ರಕಾರ ಕೌಟುಂಬಿಕ ಕಲಹವೇ ಇದಕ್ಕೆ ಕಾರಣ ಎನ್ನಲಾಗುತ್ತಿದೆ.

ಈ ಕುರಿತು ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

Related Posts

LEAVE A REPLY

Please enter your comment!
Please enter your name here

Stay Connected

0FansLike
3,802FollowersFollow
0SubscribersSubscribe
- Advertisement -spot_img

Latest Posts