ಭಾರಿ ಮಳೆಗೆ ರೈತರ ಬೆಳೆ ಹಾನಿ; ಹೊಲಗಳಿಗೆ ನುಗ್ಗಿದ ನೀರು, ಸಂಕಷ್ಟದಲ್ಲಿ ರೈತ

0
Spread the love

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಬಳ್ಳಾರಿ: ಜಿಲ್ಲೆಯ ಸಂಡೂರು ತಾಲೂಕಿನ‌ ವಿವಿಧ ಗ್ರಾಮಗಳಲ್ಲಿ ಭಾರಿ ಮಳೆ ಸುರಿದ ಪರಿಣಾಮ ನಾರಿಹಳ್ಳ ತುಂಬಿ ಹರಿಯುತ್ತಿದೆ.

ಜೊತೆಗೆ ನಾರಿಹಳ್ಳ ಜಲಾಶಯದಿಂದ ಅಪಾರ ಪ್ರಮಾಣದ ನೀರು ಹೊರಕ್ಕೆ ಬಿಟ್ಟ ಪರಿಣಾಮ ನೀರು ರೈತರ ಹೊಲಗಳಿಗೆ ನುಗ್ಗಿದೆ.

ಮಳೆ ಹಾಗೂ ನಾರಿಹಳ್ಳ ಜಲಾಶಯದ ನೀರಿನ ರಭಸಕ್ಕೆ ನೂರಾರು ಎಕರೆ ಬೆಳೆ ನಾಶವಾಗಿದ್ದು, ಸಂಡೂರು ತಾಲೂಕಿನ, ಕುರೆಕುಪ್ಪೆ, ವಡ್ಡು ಗ್ರಾಮ ಸೇರಿದಂತೆ ವಿವಿಧ ಗ್ರಾಮಗಳ ರೈತರ ಬೆಳೆ ಹಾಳಾಗಿದೆ.

ಕಳೆದ ಎರಡು ದಿನಗಳಿಂದ ಸುರಿದ ಮಳೆಗೆ ರೈತರು ಕಂಗಾಲಾಗಿದ್ದಾರೆ.


Spread the love

LEAVE A REPLY

Please enter your comment!
Please enter your name here