ಮತ್ತೊಮ್ಮೆ ಉಡಾಫೆಯಿಂದ ಉತ್ತರಿಸಿದ ಕತ್ತಿ!

0
Spread the love

ವಿಜಯಸಾಕ್ಷಿ ಸುದ್ದಿ, ಬಾಗಲಕೋಟೆ

Advertisement

ಸಚಿವ ಉಮೇಶ ಕತ್ತಿ ಅವರು ಮತ್ತೊಮ್ಮೆ ಜನರ ನೋವಿನ ಬಗ್ಗೆ ಹಗುರವಾಗಿ ಮಾತನಾಡಿದ್ದಾರೆ. ಬೀಳಗಿ ಪಟ್ಟಣದ ತಾಪಂ ಸಭಾಭವನದಲ್ಲಿ ಅಧಿಕಾರಿಗಳ ಜೊತೆ ಸಭೆ ನಡೆಸಿ ಮಾತನಾಡಿದ ಅವರು, ಹಾರ್ಟ್ ಅಟ್ಯಾಕ್, ಶುಗರ್ ನಿಂದ ಜನ ಸತ್ತರೆ ಏನೂ ಮಾಡಲು ಆಗುವುದಿಲ್ಲ ಎಂದು ಉಡಾಫೆ ಉತ್ತರ ನೀಡಿದ್ದಾರೆ.

ಕೋವಿಡ್ ನಲ್ಲಿ ಸಾಕಷ್ಟು ಜನ ಸಾಯುತ್ತಿದ್ದಾರೆ. ನಾನು ಯಾರು ಸಾಯಬಾರದು ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. ಸಾಯುವವರು ಯಾಕೆ ಸತ್ತರೂ ಅಂತ ಎನ್ನುವುದಕ್ಕೆ ಲೆಕ್ಕ ಇಲ್ಲ. ಕೋವಿಡ್ ನ ಸಂದರ್ಭದಲ್ಲಿ ತೊಂದರೆಯಾಗುತ್ತಿವೆ. ರೆಮಿಡಿಸಿವರ್ ಕೊಟ್ಟರೂ ಜನ ಸಾಯುತ್ತಿದ್ದಾರೆ. ಅದಕ್ಕೆ ಏನು ಮಾಡೋಕಾಗುತ್ತದೆ. ಅವರಿಗೆ ಹಾರ್ಟ್ ಅಟ್ಯಾಕ್, ಶುಗರ್ ಇರುತ್ತದೆ. ಅಂತಹ ವ್ಯಕ್ತಿಗಳಿಗೆ ಪಂಪ್ ಹೊಡೆದು ಧೈರ್ಯ ತುಂಬಲು ಆಗುವುದಿಲ್ಲ ಎಂದು ಉಡಾಫೆಯಾಗಿ ಉತ್ತರ ನೀಡಿದ್ದಾರೆ.

ಮಾಧ್ಯಮದಲ್ಲಿ ಹೆಣ, ಆಂಬುಲೆನ್ಸ್, ಹೆಣ ಸುಡೋದು ತೋರಿಸಿ ಭಯ ಹುಟ್ಟಿಸಲಾಗುತ್ತಿದೆ. ಹಲವರು ಮಾಧ್ಯಮದಿಂದ ಮಾನಸಿಕವಾಗುತ್ತಿದ್ದಾರೆ. ಯಾರು ಏಕೆ ಸತ್ತರು ಎಂದು ಗೊತ್ತಿಲ್ಲ. ಬುಲೆಟಿನ್ ನಲ್ಲಿ ತಪ್ಪು ಆಗಿರಬಹುದು. ನಾವು ಸತ್ಯಹರಿಶ್ಚಂದ್ರನ ಮೊಮ್ಮಕ್ಕಳು ಅಂತ ಹೇಳುತ್ತಿಲ್ಲ. ತಪ್ಪಾಗಿದ್ದರೆ ತಿಳಿಸಿ ಎಂದು ಹೇಳಿದ್ದಾರೆ.


Spread the love

LEAVE A REPLY

Please enter your comment!
Please enter your name here