36.4 C
Gadag
Friday, June 2, 2023

ಮತ್ತೊಮ್ಮೆ ನಾಲಿಗೆ ಹರಿಬಿಟ್ಟ ಸಚಿವ ಮಾಧುಸ್ವಾಮಿ: ನೀರು ಕೇಳಿದ ಗ್ರಾಮಸ್ಥರಿಗೆ ಅಸಂವಿಧಾನಿಕ ಪದ ಬಳಕೆ

Spread the love

ವಿಜಯಸಾಕ್ಷಿ ಸುದ್ದಿ, ತುಮಕೂರು: ಸಚಿವ ಮಾಧುಸ್ವಾಮಿ ಮತ್ತೊಮ್ಮೆ ನಾಲಿಗೆ ಹರಿಬಿಟ್ಟ ಘಟನೆ ನಡೆದಿದೆ. ಗ್ರಾಮಸ್ಥರು ನೀರು ಕೇಳಿದ್ದಕ್ಕೆ ಅವಾಚ್ಯ ಶಬ್ದದಿಂದ ಸಚಿವರು ನಿಂದಿಸಿದ್ದಾರೆ.

ಜಿಲ್ಲೆಯ ಶಿರಾ ತಾಲೂಕಿನ ಗೋಪಾಲದೇವರಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ನೀರು, ಮೂಲಭೂತ ಸೌಕರ್ಯಕ್ಕಾಗಿ ಆಗ್ರಹಿಸಿ, ಗ್ರಾ.ಪಂ. ಚುನಾವಣೆಯನ್ನು ಈ ಗ್ರಾಮಸ್ಥರು ಬಹಿಷ್ಕರಿಸಿದ್ದರು.

ಇನ್ನು ಚುನಾವಣೆ ಬಳಿಕ ಗ್ರಾಮಕ್ಕೆ ಭೇಟಿ ನೀಡಿದ್ದ ಸಚಿವ ಮಾಧುಸ್ವಾಮಿ, ಚುನಾವಣೆ ಬಹಿಷ್ಕರಿಸಿದ್ದಕ್ಕೆ ಕುಪಿತಗೊಂಡು ಆಕ್ರೋಷ ವ್ಯಕ್ತಪಡಿಸಿದರು. ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಮುಖಂಡರಿಗೆ, ಹೇಮಾವತಿ ನೀರು ಕೇಳಿದ ರೈತರಿಗೆ ತರಾಟೆ ತೆಗೆದುಕೊಂಡರು.

ಅಷ್ಟೇ ಅಲ್ಲದೇ ನೆರದಿದ್ದವರಿಗೆ ಅಸಂವಿಧಾನಿಕ ಪದಗಳ ಬಳಸಿ ಅವಾಜ್ ಹಾಕಿದರು. ಶೇಷೇನಹಳ್ಳಿ ಕೆರೆ,ದೊಡ್ಡ ಅಗ್ರಹಾರ ಕೆರೆಗಳಿಗೆ ಹೇಮಾವತಿ ನೀರು ಹರಿಸಬೇಕು ಅಂತಾ ರೈತರು ಒತ್ತಾಯಿಸಿದ್ದರು. ಮಾಧುಸ್ವಾಮಿ ಅವರು ಬಾಯಿ ಹರಿಬಿಟ್ಟ ವಿಡಿಯೋ ಈಗ ವೈರಲ್ ಆಗಿದೆ.


Spread the love

Related Posts

LEAVE A REPLY

Please enter your comment!
Please enter your name here

Stay Connected

0FansLike
3,792FollowersFollow
0SubscribersSubscribe
- Advertisement -spot_img

Latest Posts