ಮನೀಷಾ ಹತ್ಯೆ ಖಂಡಿಸಿ ಪ್ರತಿಭಟನೆ

0
Spread the love

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ
ಉತ್ತರ ಪ್ರದೇಶದ ದಲಿತ ಯುವತಿ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಆರೋಪಿಗಳನ್ನು ಕೂಡಲೇ ಗಲ್ಲಿಗೇರಿಸಬೇಕು. ಪ್ರಕರಣದಲ್ಲಿ ಅಲ್ಲಿನ ಬಿಜೆಪಿ ಸರ್ಕಾರದ ನಿರ್ಲಕ್ಷ್ಯ ಖಂಡಿಸಿ ಬೆಟಗೇರಿ ಸಾರ್ವಜನಿಕರು ಪ್ರತಿಭಟನೆ ನಡೆಸಿದರು.
ಡಿಎಸ್‌ಎಸ್ (ಅಂಬೇಡ್ಕರವಾದ) ಮುಖಂಡ ಮುತ್ತಪ್ಪ ಭಜಂತ್ರಿ ಮಾತನಾಡಿ, ಇದೊಂದು ಪೈಶಾಚಿಕ ಕೃತ್ಯವಾಗಿದೆ. ಅತ್ಯಾಚಾರ-ಹತ್ಯೆ ತಡೆಗಟ್ಟಲು ಉತ್ತರ ಪ್ರದೇಶ ಸರ್ಕಾರ ವಿಫಲವಾಗಿದೆ. ಈ ಸರ್ಕಾರವನ್ನು ವಜಾಗೊಳಿಸಿ ರಾಷ್ಟ್ರಪತಿ ಆಡಳಿತ ಜಾರಿಗೆ ತರುವವರೆಗೆ ನಮ್ಮ ಹೋರಾಟ ಮುಂದುವರಿಯಲಿದೆ ಎಂದು ಹೇಳಿದರು.
ನಗರಸಭೆ ಮಾಜಿ ಸದಸ್ಯ ಮಂಜುನಾಥ ಹೇಮಣ್ಣ ಮುಳಗುಂದ ಮಾತನಾಡಿ, ಮನೀಷಾಳಂತ ಹೆಣ್ಣು ಮಕ್ಕಳ ಗೋಳು ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಅವರಿಗೆ ಗೊತ್ತಾಗುತ್ತಿಲ್ಲ. ಮುಂದಿನ ದಿನಮಾನಗಳಲ್ಲಿ ಅಂತಹ ಸರ್ಕಾರದ ವಿರುದ್ಧ ದಲಿತರ ಪ್ರತಿಭಟನೆ ಇದ್ದೇ ಇರುತ್ತದೆ ಎಂದು ಹೇಳಿದರು.
ದಲಿತ ಮುಖಂಡರಾದ ಕೆಂಚಪ್ಪ ಮ್ಯಾಗೇರಿ, ಡಿಎಸ್‌ಎಸ್ ಮುಖಂಡ ಬಾಲರಾಜ, ಅಬ್ದುಲ್ ಕಲಾಮ್ ಕ್ಷೇಮಾಭಿವೃದ್ದಿ ಟ್ರಸ್ಟ್‌ನ ಮುಖಂಡ ರಾಜೇಸಾಬ ಬಳ್ಳಾರಿ ಮಾತನಾಡಿದರು.
ಈ ಸಂದರ್ಭದಲ್ಲಿ ವಿವಿಧ ಸಂಘಟನೆಗಳ ಮುಖಂಡರಾದ ಶರೀಫ್ ಬಿಳೆಯಲಿ, ಅರುಣ ಹಿರೇಮಠ, ಪರಶುರಾಮ ಕಾಳೆ, ಅನಿಲ ಕಾಳೆ, ಆಂಜನೇಯ ಜಾಲಗಾರ, ಚಿನ್ನುಸ್ವಾಮಿ ಬಳ್ಳಾರಿ, ಅಮೀರ ಸೈಯದ್, ಚಿದಾನಂದ ಶ್ಯಾವಿ, ಮಂಜುನಾಥ ದೊಡ್ಡಮನಿ, ಚಂದ್ರಶೇಖರ ದಾಸರ, ಬಸವರಾಜ ವಡ್ಡರ, ರಫೀಕ್ ತಹಶೀಲ್ದಾರ್, ವೆಂಕಪ್ಪ ದಾಸರ, ಯಶವಂತ ಭಜಂತ್ರಿ ಮತ್ತಿತರರು ಉಪಸ್ಥಿತರಿದ್ದರು.


Spread the love

LEAVE A REPLY

Please enter your comment!
Please enter your name here