ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ: ಅತಿಯಾದ ಮಳೆಯಿಂದಾಗಿ ಚರಂಡಿ ನೀರೂ ಸಹ ಮನೆಗಳಿಗೆ ನುಗ್ಗಿರುವ ಘಟನೆ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಆದರಳ್ಳಿಯಲ್ಲಿ ನಡೆದಿದೆ.
ಗ್ರಾಮದ ತಗ್ಗಿನ ಪ್ರದೇಶದಲ್ಲಿರುವ ವಡ್ಡರ ಪಾಳ್ಯದಲ್ಲಿ ಈ ಘಟನೆ ನಡೆದಿದ್ದು, ರಾತ್ರಿ ಸುರಿದ ಮಳೆಯಿಂದಾಗಿ ಮಳೆ ನೀರಿನ ಜೊತೆ ಚರಂಡಿ ನೀರೂ ಸಹ ಮನೆಗಳಿಗೆ ನುಗ್ಗಿ ಜನರು ಪರದಾಡುವಂತೆ ಮಾಡಿದೆ.
![](http://vijayasakshi.com/wp-content/uploads/2020/10/img_20201022_68673703534674986827658.jpg)
ವಡ್ಡರ ಪಾಳ್ಯದಲ್ಲಿರುವ ಬಹುತೇಕ ಮನೆಗಳಿಗೆ ಚರಂಡಿ ನೀರು ನುಗ್ಗಿದ್ದು, ರಾತ್ರಿಯಿಡಿ ಮನೆಯಿಂದ ನೀರು ಹೊರಹಾಕಲು ಜನ್ರು ಹರಸಾಹಸ ಪಡುವಂತಾಗಿತ್ತು.
ಮನೆಯಲ್ಲಿನ ಧವಸಧಾನ್ಯಗಳು ನೀರುಪಾಲಾಗಿದ್ದು, ಸರಿಯಾದ ಚರಂಡಿ ವ್ಯವಸ್ಥೆ ಮಾಡುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಈ ಮೊದಲೇ ಇಲ್ಲಿ ಚರಂಡಿ ನಿರ್ಮಿಸಲು, ಸಾಕಷ್ಟು ಬಾರಿ ಮನವಿ ಮಾಡಿದ್ದರೂ ಯಾವೊಬ್ಬ ಅಧಿಕಾರಿಗಳೂ ತಲೆ ಕೆಡೆಸಿಕೊಂಡಿಲ್ಲ. ಇನ್ನು ಶಾಸಕ ರಾಮಣ್ಣ ಲಮಾಣಿ ಸಹ ಸ್ಪಂದನೆ ನೀಡುತ್ತಿಲ್ಲ ಅಂತ ನಿವಾಸಿಗಳ ಅಳಲು ತೋಡಿಕೊಂಡಿದ್ದಾರೆ.