ವಿಜಯಸಾಕ್ಷಿ ಸುದ್ದಿ, ಗದಗ
ಆಕಸ್ಮಿಕ ಬೆಂಕಿಗೆ ಎಲೆಕ್ಟ್ರಿಕಲ್ ಸಾಮಾಗ್ರಿಗಳು ಸುಟ್ಟು ಭಸ್ಮವಾಗಿರುವ ಘಟನೆ ಗುರುವಾರ ಸಂಜೆ ಜಿಲ್ಲೆಯ ರೋಣ ಪಟ್ಟಣದಲ್ಲಿ ನಡೆದಿದೆ.
ಪಟ್ಟಣದಲ್ಲಿ ಎಲೆಕ್ಟ್ರಿಕಲ್ ವಸ್ತುಗಳನ್ನು ರಿಪೇರಿ ಮಾಡುತ್ತಿದ್ದ ವಿಶ್ವನಾಥ ಬಾಕಳೆ ಎಂಬುವರಿಗೆ ಸೇರಿದ ಸಾಮಾಗ್ರಿಗಳು ಅಗ್ನಿ ಕೆನ್ನಾಲೆಗೆ ಸುಟ್ಟು ಕರಕಲಾಗಿವೆ.

ಹಳೆಯ ಎಲೆಕ್ಟ್ರಿಕಲ್ ಸಾಮಾಗ್ರಿ
ರಿಪೇರಿ ಮಾಡಲು ತಂದು ಮನೆಯ ಮೇಲ್ಭಾಗದಲ್ಲಿ ಟಿವಿ, ರೆಡಿಯೋ, ಗಡಿಯಾರ, ಪ್ರಿಡ್ಜ್, ಮಿಕ್ಸರ್, ಪ್ಯಾನ್ ಹೀಗೆ ಸಂಗ್ರಹಿಸಿಡಲಾಗಿದ್ದ ಅನೇಕ ಎಲೆಕ್ಟ್ರಿಕಲ್ ವಸ್ತುಗಳು ಬೂದಿಯಾಗಿವೆ.
ಅಗ್ನಿಶಾಮಕ ದಳ ಸಿಬ್ಬಂದಿಗಳು ಬೆಂಕಿ ನಂದಿಸುವಲ್ಲಿ ನಿರತರಾಗಿದ್ದಾರೆ.