ಮನೆ ಮೇಲೆ ಮದುವೆ ದಿಬ್ಬಣದ ಬಸ್ ಪಲ್ಟಿ; 8 ಜನರ ದುರ್ಮರಣ

0
Spread the love

ವಿಜಯಸಾಕ್ಷಿ ಸುದ್ದಿ, ಮಂಗಳೂರು

ಮನೆ ಮೇಲೆ ಮದುವೆ ದಿಬ್ಬಣಕ್ಕೆ ಹೊರಟಿದ್ದ ಬಸ್ ಪಲ್ಟಿಯಾಗಿ
ಬಸ್ ನಲ್ಲಿದ್ದ ಎಂಟು ಜನ ದುರ್ಮರಣ ಹೊಂದಿರುವ ಘಟನೆ
ಕರ್ನಾಟಕ ಕೇರಳ ಗಡಿಭಾಗದ ಕಾಸರಗೋಡಿನ ಕಲ್ಲಪಳ್ಳಿ ಬಳಿ ನಡೆದಿದೆ.

ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲ್ಲೂಕಿನ ಪುತ್ತೂರಿನಿಂದ ಕೊಡಗಿನ ಕರಿಕೆಯಲ್ಲಿದ್ದ ಮದುವೆ ಕಾರ್ಯಕ್ರಮಕ್ಕೆ ಕೇರಳದ ಪಾಣತ್ತೂರು ಮೂಲಕ ಹೊರಟಿದ್ದ ಖಾಸಗಿ ಬಸ್ ನಲ್ಲಿ
ಒಟ್ಟು 63 ಜನ ಪ್ರಯಾಣಿಕರಿದ್ದರು.

ಮೃತರನ್ನು ರಾಜೇಶ್, ರವಿಚಂದ್ರ, ಆದರ್ಶ, ಶ್ರೇಯಸ್, ಸುಮತಿ, ಶಶಿ, ಜಯಲಕ್ಷ್ಮಿ ಎಂದು ಗುರುತಿಸಲಾಗಿದೆ.

ಬಸ್ ಪಲ್ಟಿಯಾಗಿರುವ ಪರಿಣಾಮದಿಂದಾಗಿ ಬಸ್ ನಲ್ಲಿದ್ದ ಹತ್ತುಕ್ಕೂ ಹೆಚ್ಚಿನ ಜನರ ಪರಿಸ್ಥಿತಿ ಗಂಭೀರವಾಗಿದ್ದು, ಮೂವತ್ತುಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಸುದ್ದಿ ತಿಳಿದು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ರಕ್ಷಣಾ ಕಾರ್ಯಚರಣೆಯಲ್ಲಿ ತೊಡಗಿದ್ದಾರೆ.

ಗಾಯಗೊಂಡವರನ್ನು ಮಂಗಳೂರು ಹಾಗೂ ಕಾಸರಗೋಡಿನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನೆಯ ಕುರಿತು ಕೇರಳ ಮುಖ್ಯಮಂತ್ರಿ ಪಿಣರಾಯನ್ ತನಿಖೆಗೆ ಆದೇಶಸಿದ್ದಾರೆ.


Spread the love

LEAVE A REPLY

Please enter your comment!
Please enter your name here