ಮರಳು ಅಕ್ರಮಕ್ಕೆ ಲಂಚ ಪಡೆದ್ರಾ ತಹಶೀಲ್ದಾರರು? ಲಂಚ ಪಡೆಯುತ್ತಿರೋ ದೃಶ್ಯ ವೈರಲ್

0
Spread the love

ವಿಜಯಸಾಕ್ಷಿ ಸುದ್ದಿ, ಕೊಪ್ಪಳ:
ಕೊಪ್ಪಳ ಜಿಲ್ಲೆಯಲ್ಲಿ ಮರಳುಗಾರಿಕೆಗೆ ಕೊರತೆ ಏನಿಲ್ಲ. ಇಲ್ಲಿನ ಮರಳು ದೂರದ ಹುಬ್ಬಳ್ಳಿ, ಬಳ್ಳಾರಿಗೂ ಹೋಗುತ್ತಿತ್ತು. ಆದರೆ ಇತ್ತೀಚಿನ ಕಠಿಣ ಕಾನೂನುಗಳಿಂದ ಮರಳು ಅಕ್ರಮ ಅವ್ಯಾಹತವಾಗಿ ನಡೆಯುತ್ತಿದೆ ಎನ್ನಬಹುದು.

ಜಿಲ್ಲೆಯ ಗಂಗಾವತಿ ತಹಶೀಲ್ದಾರ್ ರೇಣುಕಾ ಅವರು ಸಾರ್ವಜನಿಕರೊಂದಿಗೆ ಸರಿಯಾಗಿ ವರ್ತಿಸುವುದಿಲ್ಲ, ದರ್ಪ ತೋರುತ್ತಾರೆ ಎಂಬ ಆರೋಪಗಳಿದ್ದವು. ಜೊತೆಗೆ ಮರಳು ಅಕ್ರಮಕ್ಕೆ ರೇಣುಕಾ ಮೇಡಂ ಅಭಯಹಸ್ತ ಇದೆ ಎಂಬ ಮಾತುಗಳು ಕೇಳಿ ಬಂದಿದ್ದವು.

ಈ ಬಗ್ಗೆ ಸಾಮಾಜಿಕ ಹೋರಾಟಗಾರರು ತಹಶೀಲ್ದಾರ್ ಅವರಿಗೆ ಅಕ್ರಮಕ್ಕೆ ಬ್ರೆಕ್ ಹಾಕುವಂತೆ ಮೌಖಿಕವಾಗಿ, ಲಿಖಿತವಾಗಿ ದೂರು ನೀಡಿದರೂ ಕ್ರಮ ಕೈಗೊಳ್ಳದ ತಹಶೀಲ್ದಾರರು, ಅಕ್ರಮ ನಡೆಸುವವರು ಎಚ್ಚೆತ್ತುಕೊಳ್ಳುವಂತೆ ಮಾಡಿದ್ದರು‌ ಎನ್ನಲಾಗಿದೆ.

ಮೂರ್ನಾಲ್ಕು ದಿನಗಳ ಹಿಂದೆ ಕಚೇರಿಯಲ್ಲೇ ಕುಲ್ಲಂಕುಲ್ಲಾ ಡೀಲ್‌ಗೆ ಇಳಿದ ತಹಶೀಲ್ದಾರರು ಮರಳು ಅಕ್ರಮಕ್ಕೆ ಲಂಚ ಪಡೆಯುತ್ತಿರೊ ದೃಶ್ಯ ಈಗ ಎಲ್ಲೆಡೆ ವೈರಲ್ ಆಗಿದೆ.

ಪ್ರತಿ ಟ್ರ್ಯಾಕ್ಟರ್‌ಗೆ 20 ಸಾವಿರ ರೂಪಾಯಿ ಕೊಡಬೇಕು. ಅಡ್ವಾನ್ಸ್ ಆಗಿ 10 ಸಾವಿರ ಕೊಡುವಂತೆ ಬೇಡಿಕೆ ಇಟ್ಟಿರೊ, ಎದುರಿಗಿದ್ದ ವ್ಯಕ್ತಿ 5 ಸಾವಿರ ರೂಪಾಯಿ ಅಡ್ವಾನ್ಸ್ ಎಂದು ಹೇಳುತ್ತಾನೆ. ಆಗ ತಹಶೀಲ್ದಾರರು ಇನ್ನೂ 15 ಸಾವಿರ ರೂಪಾಯಿ? ಅಂತ ಕೇಳುವ ದೃಶ್ಯ ವಿಡಿಯೋದಲ್ಲಿದೆ.

ಗಂಗಾವತಿ ತಹಶೀಲ್ದಾರರ ಬಗ್ಗೆ ನಿನ್ನೆಯಷ್ಟೇ ಈ ಕುರಿತು ದೂರು ಬಂದಿತ್ತು. ಈಗಾಗಲೇ ಎಚ್ಚರಿಕೆ ನೀಡಿದ್ದೇನೆ. ನನ್ನ ಬಳಿ ವಿಡಿಯೊ ಇಲ್ಲ. ವಿಡಿಯೋ ನೋಡಿದ ನಂತರ ಸರಕಾರಕ್ಕೆ ಸೂಕ್ತ ಕ್ರಮ ಕೈಗೊಳ್ಳುವಂತೆ ಪತ್ರ ಬರೆಯುತ್ತೇನೆ.

-ವಿಕಾಸ್ ಕಿಶೋರ್ ಸುರಳ್ಕರ್, ಜಿಲ್ಲಾಧಿಕಾರಿ, ಕೊಪ್ಪಳ

Spread the love

LEAVE A REPLY

Please enter your comment!
Please enter your name here