25.7 C
Gadag
Wednesday, June 7, 2023

ಮೂರನೇ ದಿನವೂ ಮುಂದುವರೆದ ಮುಷ್ಕರ; ಊಟಕ್ಕಾಗಿ ಪರದಾಡುತ್ತಿರುವ ಸಿಬ್ಬಂದಿ

Spread the love

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ: ಸರ್ಕಾರಿ ನೌಕರರನ್ನಾಗಿ ಮಾಡುವಂತೆ ಆಗ್ರಹಿಸಿ ರಾಜ್ಯಾದ್ಯಂತ ಬಸ್ ಬಂದ್ ಮಾಡಿ ಮುಷ್ಕರ ನಡೆಸುತ್ತಿರುವ ಸಾರಿಗೆ ಸಂಸ್ಥೆಯ ಸಿಬ್ಬಂದಿಗಳು ಕಳೆದ ಮೂರು ದಿನಗಳಿಂದ ನಗರದಲ್ಲಿ ಸಿಲುಕಿ ಪರದಾಡುತ್ತಿದ್ದಾರೆ.

ಮುಷ್ಕರದಿಂದಾಗಿ ಕಾರವಾರ, ಮಂಗಳೂರು, ಮೈಸೂರು ಸೇರಿದಂತೆ ದೂರದೂರಿನ ಡಿಪೋಗಳಿಂದ ನಗರಕ್ಕೆ ಬಂದಿರುವ ಚಾಲಕ, ನಿರ್ವಾಹಕರು ಕೇಂದ್ರ ನಿಲ್ದಾಣದ ವಸತಿ ಗೃಹದಲ್ಲಿ ವಾಸ್ತವ್ಯ ಮಾಡಿದ್ದು, ನೌಕರರಿಗೆ ಸಮರ್ಪಕವಾಗಿ ಉಪಹಾರ, ಊಟ ಸಿಗದೆ ಸಂಕಷ್ಟ ಅನುಭವಿಸುತ್ತಿದ್ದಾರೆ.

ಬಸ್ ನಿಲ್ದಾಣದಲ್ಲಿರುವ ಮಳಿಗೆಗಳು ಕಳೆದ ಮೂರು ದಿನಗಳಿಂದ ಬಾಗಿಲು ಮುಚ್ಚಿದ್ದು, ಹೊರ ಜಿಲ್ಲೆಗಳಿಂದ ಒಟ್ಟು 10 ಸಿಬ್ಬಂದಿಗಳು ಮರಳಿ ತಮ್ಮ ಮೂಲ ಸ್ಥಳಗಳಿಗೆ ಹೋಗಲಾಗದೇ ಪರದಾಡುತ್ತಿದ್ದಾರೆ.

ಅಲ್ಲದೇ, ನಗರದ ಕೇಂದ್ರೀಯ ಬಸ್ ನಿಲ್ದಾಣದ ಬಸ್ ಮತ್ತು ಪ್ರಯಾಣಿಕರಿಲ್ಲದೇ ಬಣಗುಡುತ್ತಿದೆ. ಮತ್ತೊಂದೆಡೆ ಮೂರು ದಿನಗಳಿಂದ ಸಾರಿಗೆ ಬಸ್ ಸಂಚಾರವಿಲ್ಲದೇ ಪರದಾಡುತ್ತಿರುವ ಪ್ರಯಾಣಿಕರು ಖಾಸಗಿ ವಾಹನಗಳ ಮೊರೆ ಹೊರಟಿದ್ದಾರೆ.


Spread the love

Related Posts

LEAVE A REPLY

Please enter your comment!
Please enter your name here

Stay Connected

0FansLike
3,803FollowersFollow
0SubscribersSubscribe
- Advertisement -spot_img

Latest Posts